ಹೊಸದಿಲ್ಲಿ: ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಅವರ ಅನಾರೋಗ್ಯದ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಈ ಮೂಲಕ ಉತ್ತರ ನೀದ್ದಾರೆ. ಈಗಾಗಲೇ ನನ್ನ ಆರೋಗ್ಯ ವಿಚಾರವಾಗಿ ಸುಳ್ಳು ಸುದ್ದಿಗಳು ಹಲವು ದಿನಗಳಿಂದ ಹರದಾಡುತ್ತಿವೆ. ಇನ್ನು ಕೆಲವರು ನನ್ನ ಸಾವಿನ ಬಗ್ಗೆ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

ಅಮಿತ್ ಶಾ ತಮ್ಮ ಆರೋಗ್ಯದ ಕುರಿತು ಮಾಡಿರುವ ಟ್ವೀಟ್

ಈಗಾಗಲೇ ಇಡೀ ದೇಶ ಕೊರೋನಾ ಸೋಂಕಿನ ಭಯದ ನೆರಳಲ್ಲಿದೆ. ದೇಶದ ಒಬ್ಬ ಮಂತ್ರಿ ಸ್ಥಾನದಲ್ಲಿರುವ ನಾನು ನನ್ನ ಬಗ್ಗೆ ಹಬ್ಬಿರುವ ಸುಳ್ಳು ವಂದಂತಿ ಬಗ್ಗೆ ಕಾಳಜಿ ವಹಿಸಿಲ್ಲ. ಹಗಲಿರುಳು ಕೊರೋನಾ ಸೋಂಕಿನಿಂದ ಆಗುತ್ತಿರುವ ತೊಂದರೆ ನಿವಾರಣೆಯಲ್ಲಿ ನನ್ನನ್ನು ನಾನು ಹೆಚ್ಚು ತೊಡಗಿಸಿಕೊಂಡಿದ್ದೇನೆ. ಆದರೆ ಬಹಳಷ್ಟು ಜನರು ತಮ್ಮ ಕಾಲ್ಪನಿಕ ಯೋಚನೆಯಿಂದ ಆನಂದ ಪಡುತ್ತಿದ್ದಾರೆ ಎನ್ನುವುದು ತಿಳಿಯಿತು. ಆದರೆ ಕಳೆದ ಎರಡು ದಿನಗಳಿಂದ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ನನ್ನ ಹಿತ ಚಿಂತಕರು ಈ ಬಗ್ಗೆ ಬಹಳಷ್ಟು ಚಿಂತೆಗೊಳಗಾಗಿದ್ದರು. ಈ ಕಾರಣದಿಂದಾಗಿ ನನ್ನ ಜನರ ಆತಂಕ ದೂರ ಮಾಡುವ ಉದ್ದೇಶದಿಂದ ನನ್ನ ಆರೋಗ್ಯದ ಬಗ್ಗೆ ಹಬ್ಬಿರುವ ವದಂತಿ ಬಗ್ಗೆ ಸ್ಪಷ್ಟಿಕರಣ ನೀಡುತ್ತಿದ್ದೇನೆ.

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆಯಿಂದ ಬಳಲುತ್ತಿಲ್ಲ. ಹಾಗೂ ನನ್ನ ಆರೋಗ್ಯದ ಕುರಿತು ಹರಿಬಿಡಲಾಗಿರುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ಬಿಜೆಪಿಯ ಕಾರ್ಯಕರ್ತರು ಹಾಗೂ ಅವರ ಹಿತೈಶಿಗಳಲ್ಲಿ ಅಮಿತ್ ಶಾ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹಾರಾಷ್ಟ್ರದಿಂದ ಬಂದವರಿಗೆ ಹೊಸ ನಿಯಮ!

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲಿಯೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್…

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.

ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

ಬೆಂಗಳೂರು: ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಸರ್ಕಾರ ಕೆಲವು ಸೂಚನೆಗಳನ್ನು ನೀಡಿದೆ. ಸರ್ಕಾರ ನೀಡಿದ ಸೂಚನೆಗಳು ಈ…

ಮುಂದುವರೆದ ಸೋಂಕು ತೀವ್ರತೆ, ಸಾವಿನ ಪ್ರಮಾಣ ರಾಜ್ಯದಲ್ಲಿಂದು 2,627 ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು?

ಶನಿವಾರ 2,798 ಕೇಸ್ಗಳೊಂದಿಗೆ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 5ನೆ ಸ್ಥಾನಕ್ಕೇರಿದ್ದ ರಾಜ್ಯ, ಇಂದು 2,627 ಪಾಸಿಟಿವ್ಗಳನ್ನು…