ಹೊಸದಿಲ್ಲಿ: ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಅವರ ಅನಾರೋಗ್ಯದ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಈ ಮೂಲಕ ಉತ್ತರ ನೀದ್ದಾರೆ. ಈಗಾಗಲೇ ನನ್ನ ಆರೋಗ್ಯ ವಿಚಾರವಾಗಿ ಸುಳ್ಳು ಸುದ್ದಿಗಳು ಹಲವು ದಿನಗಳಿಂದ ಹರದಾಡುತ್ತಿವೆ. ಇನ್ನು ಕೆಲವರು ನನ್ನ ಸಾವಿನ ಬಗ್ಗೆ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

ಅಮಿತ್ ಶಾ ತಮ್ಮ ಆರೋಗ್ಯದ ಕುರಿತು ಮಾಡಿರುವ ಟ್ವೀಟ್

ಈಗಾಗಲೇ ಇಡೀ ದೇಶ ಕೊರೋನಾ ಸೋಂಕಿನ ಭಯದ ನೆರಳಲ್ಲಿದೆ. ದೇಶದ ಒಬ್ಬ ಮಂತ್ರಿ ಸ್ಥಾನದಲ್ಲಿರುವ ನಾನು ನನ್ನ ಬಗ್ಗೆ ಹಬ್ಬಿರುವ ಸುಳ್ಳು ವಂದಂತಿ ಬಗ್ಗೆ ಕಾಳಜಿ ವಹಿಸಿಲ್ಲ. ಹಗಲಿರುಳು ಕೊರೋನಾ ಸೋಂಕಿನಿಂದ ಆಗುತ್ತಿರುವ ತೊಂದರೆ ನಿವಾರಣೆಯಲ್ಲಿ ನನ್ನನ್ನು ನಾನು ಹೆಚ್ಚು ತೊಡಗಿಸಿಕೊಂಡಿದ್ದೇನೆ. ಆದರೆ ಬಹಳಷ್ಟು ಜನರು ತಮ್ಮ ಕಾಲ್ಪನಿಕ ಯೋಚನೆಯಿಂದ ಆನಂದ ಪಡುತ್ತಿದ್ದಾರೆ ಎನ್ನುವುದು ತಿಳಿಯಿತು. ಆದರೆ ಕಳೆದ ಎರಡು ದಿನಗಳಿಂದ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ನನ್ನ ಹಿತ ಚಿಂತಕರು ಈ ಬಗ್ಗೆ ಬಹಳಷ್ಟು ಚಿಂತೆಗೊಳಗಾಗಿದ್ದರು. ಈ ಕಾರಣದಿಂದಾಗಿ ನನ್ನ ಜನರ ಆತಂಕ ದೂರ ಮಾಡುವ ಉದ್ದೇಶದಿಂದ ನನ್ನ ಆರೋಗ್ಯದ ಬಗ್ಗೆ ಹಬ್ಬಿರುವ ವದಂತಿ ಬಗ್ಗೆ ಸ್ಪಷ್ಟಿಕರಣ ನೀಡುತ್ತಿದ್ದೇನೆ.

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆಯಿಂದ ಬಳಲುತ್ತಿಲ್ಲ. ಹಾಗೂ ನನ್ನ ಆರೋಗ್ಯದ ಕುರಿತು ಹರಿಬಿಡಲಾಗಿರುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ಬಿಜೆಪಿಯ ಕಾರ್ಯಕರ್ತರು ಹಾಗೂ ಅವರ ಹಿತೈಶಿಗಳಲ್ಲಿ ಅಮಿತ್ ಶಾ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೊಬೈಲ್ ಬಳಕೆ ಬೇಡ ಅಂದಿದ್ದಕ್ಕೆ ಏನ್ ಮಗು ಹೀಗಾ ಮಾಡೋದು!

ಚೆನ್ನೈ : ಮೊಬೈಲ್ ಬಳಸುವ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರಿ ನೌಕರರು ಆರೋಗ್ಯ ವಿಮಾ ಸೌಲಭ್ಯವನ್ನು ಪಡೆಯಬಹುದು- ಸುಪ್ರೀಂ

ಕೇಂದ್ರ ಸರ್ಕಾರದ ನೌಕರರು ತುರ್ತು ಸಮಯದಲ್ಲಿ ಸಿಜಿಹೆಚ್‌ಎಸ್‌ ಅಂದರೆ ಕೇಂದ್ರ ಸರ್ಕಾರ ಸೂಚಿಸಿರುವ ಆಸ್ಪತ್ರೆಗಳ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ನೌಕರರ ಹಕ್ಕಿನ ಅನ್ವಯ ಸರ್ಕಾರದಿಂದ ಮೆಡಿಕ್ಲೇಮ್‌ ಪಡೆಯಬುದು ಎಂದು ಹೇಳುವ ಮೂಲಕ ಸರ್ಕಾರಿ ನೌಕರರಿಗೆ ಸುಪ್ರೀಂ ಸಿಹಿ ಸುದ್ದಿ ನೀಡಿದೆ.

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.