ಹೊಸದಿಲ್ಲಿ: ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಅವರ ಅನಾರೋಗ್ಯದ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಈ ಮೂಲಕ ಉತ್ತರ ನೀದ್ದಾರೆ. ಈಗಾಗಲೇ ನನ್ನ ಆರೋಗ್ಯ ವಿಚಾರವಾಗಿ ಸುಳ್ಳು ಸುದ್ದಿಗಳು ಹಲವು ದಿನಗಳಿಂದ ಹರದಾಡುತ್ತಿವೆ. ಇನ್ನು ಕೆಲವರು ನನ್ನ ಸಾವಿನ ಬಗ್ಗೆ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

ಅಮಿತ್ ಶಾ ತಮ್ಮ ಆರೋಗ್ಯದ ಕುರಿತು ಮಾಡಿರುವ ಟ್ವೀಟ್

ಈಗಾಗಲೇ ಇಡೀ ದೇಶ ಕೊರೋನಾ ಸೋಂಕಿನ ಭಯದ ನೆರಳಲ್ಲಿದೆ. ದೇಶದ ಒಬ್ಬ ಮಂತ್ರಿ ಸ್ಥಾನದಲ್ಲಿರುವ ನಾನು ನನ್ನ ಬಗ್ಗೆ ಹಬ್ಬಿರುವ ಸುಳ್ಳು ವಂದಂತಿ ಬಗ್ಗೆ ಕಾಳಜಿ ವಹಿಸಿಲ್ಲ. ಹಗಲಿರುಳು ಕೊರೋನಾ ಸೋಂಕಿನಿಂದ ಆಗುತ್ತಿರುವ ತೊಂದರೆ ನಿವಾರಣೆಯಲ್ಲಿ ನನ್ನನ್ನು ನಾನು ಹೆಚ್ಚು ತೊಡಗಿಸಿಕೊಂಡಿದ್ದೇನೆ. ಆದರೆ ಬಹಳಷ್ಟು ಜನರು ತಮ್ಮ ಕಾಲ್ಪನಿಕ ಯೋಚನೆಯಿಂದ ಆನಂದ ಪಡುತ್ತಿದ್ದಾರೆ ಎನ್ನುವುದು ತಿಳಿಯಿತು. ಆದರೆ ಕಳೆದ ಎರಡು ದಿನಗಳಿಂದ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ನನ್ನ ಹಿತ ಚಿಂತಕರು ಈ ಬಗ್ಗೆ ಬಹಳಷ್ಟು ಚಿಂತೆಗೊಳಗಾಗಿದ್ದರು. ಈ ಕಾರಣದಿಂದಾಗಿ ನನ್ನ ಜನರ ಆತಂಕ ದೂರ ಮಾಡುವ ಉದ್ದೇಶದಿಂದ ನನ್ನ ಆರೋಗ್ಯದ ಬಗ್ಗೆ ಹಬ್ಬಿರುವ ವದಂತಿ ಬಗ್ಗೆ ಸ್ಪಷ್ಟಿಕರಣ ನೀಡುತ್ತಿದ್ದೇನೆ.

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆಯಿಂದ ಬಳಲುತ್ತಿಲ್ಲ. ಹಾಗೂ ನನ್ನ ಆರೋಗ್ಯದ ಕುರಿತು ಹರಿಬಿಡಲಾಗಿರುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ಬಿಜೆಪಿಯ ಕಾರ್ಯಕರ್ತರು ಹಾಗೂ ಅವರ ಹಿತೈಶಿಗಳಲ್ಲಿ ಅಮಿತ್ ಶಾ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಧಾರ್ಮಿಕ ಕೇಂದ್ರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ನವದೆಹಲಿ : ಕೇಂದ್ರ ಸರ್ಕಾರದ ಸೂಚನೆಯಂತೆ ಜೂ. 8ರಿಂದ ಎಲ್ಲ ಧಾರ್ಮಿಕ ಕೇಂದ್ರಗಳು ಮರಳಿ ಓಪನ್…