ಗದಗ: ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗದಗನ ಬೆಟಗೇರಿ ನಗರದಲ್ಲಿ ಕೊವಿಡ್-19 ಸೋಂಕು ದೃಢಪಟ್ಟಿದ್ದ ಐದು ಪ್ರಕರಣಗಳಿದ್ದವು. ಇದರಲ್ಲಿ ಕೊವಿಡ್-19 ಸೋಂಕು ಧೃಡಪಟ್ಟಿದ್ದ 80ರ ವೃದ್ದೆ  ಪಿ-166 ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈಗಾಗಲೇ 59 ವರ್ಷದ ಮಹಿಳೆ ಪಿ-304 ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಮೇ.1ರಂದು ಬಿಡುಗಡೆ ಹೊಂದಿದ್ದರು. ಇಂದು ಕೊವಿಡ್-19 ನಿಗದಿತ ಆಯುಷ್ ಆಸ್ಪತ್ರೆಯಿಂದ ಪಿ-370, ಪಿ-396 ಹಾಗೂ ಪಿ-514 ಅವರುಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು ಗದಗ ಜಿಲ್ಲೆಯಲ್ಲಿ ಕೊವಿಡ್-19 ದೃಢ ಪ್ರಕರಣಗಳು ಯಾವುದು ಬಾಕಿ ಇರುವುದಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.

ಕೊರೊನಾದಿಂದಾಗಿ ಸಪ್ತಪದಿ ಸಮಯ ಬದಲಿಸಿದ ಸರ್ಕಾರ!

ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.

ಅಗಸ್ಟ್ 5 ರಂದು ಸಂಕಲ್ಪ ಯಾತ್ರೆಗೆ ಆಲಮಟ್ಟಿಯಲ್ಲಿ ಚಾಲನೆ

ಉತ್ತರಪ್ರಭಆಲಮಟ್ಟಿ : ದೇಶ, ನಾಡು ಕಟ್ಟುವಗೊಸ್ಕರ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮಹನೀಯರ ಸ್ಮರಣೆಗಾಗಿ…

ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು : ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ

ಮಹಾಮಾರಿ ಕೊರೊನಾ ಹೊಡೆದೊಡಿಸುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.