ನವದೆಹಲಿ: ಕೊರೊನಾ ವೈರಸ್ ಇಡೀ ವಿಶ್ವವನ್ನೇ ಕಂಗಾಲಾಗುವಂತೆ ಮಾಡಿದೆ. ಇಲ್ಲಿಯವರೆಗೂ 2.48 ಲಕ್ಷ ಜನರನ್ನು ಇಲ್ಲಿಯವರೆಗೂ ವೈರಸ್ ಬಲಿ ಪಡೆದಿದೆ. ನಮ್ಮ ದೇಶವೂ ಇದಕ್ಕೆ ಹೊರತಲ್ಲ. ಭಾರತದಲ್ಲಿ ಪಾಸಿಟಿವ್ ಪ್ರಕರಣ 62 ಸಾವಿರ ದಾಟಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 62,808ಕ್ಕೆ ಏರಿಕೆಯಾಗಿದೆ. 19,301 ಜನ ಗುಣಮುಖರಾಗಿದ್ದು, 2,101 ಜನ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 14 ನೇ ಸ್ಥಾನದಲ್ಲಿದೆ. ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 13.47 ಲಕ್ಷ ತಲುಪಿದೆ. 80 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ.

ಸೋಂಕಿತ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇನ್ ಇದ್ದು 2.62 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 26,400ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಸಂಖ್ಯೆಯಲ್ಲಿ ಇದು ನಾಲ್ಕನೇ ಸ್ಥಾನದಲ್ಲಿದೆ.

ಸೋಂಕಿತರ ಪಟ್ಟಿಯಲ್ಲಿ ಇಟಲಿ ಮೂರನೇ ಸ್ಥಾನದಲ್ಲಿದೆ. ಅಲ್ಲದೇ, ಮೃತಪಟ್ಟವರ ಸಂಖ್ಯೆಯಲ್ಲಿಯೂ ಇದು ಮೂರನೇ ಸ್ಥಾನದಲ್ಲಿದೆ. 2.18 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 30,300ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಯುಕೆಯಲ್ಲಿ 2.15 ಲಕ್ಷ ಜನರಿಗೆ ಸೋಂಕು ತಗುಲಿದೆ. 31,500ಕ್ಕೂ ಹೆಚ್ಚು ಜನ ಸ ವನ್ನಪ್ಪಿದ್ದಾರೆ. ಈ ರಾಷ್ಟ್ರ ಸೋಂಕಿತರ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದರೆ. ಮೃತಪಟ್ಟವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಕರ್ನಾಟಕ ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸದ್ಯ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ. 386 ಜನ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೂ ಒಟ್ಟು 30 ಜನರನ್ನು ಕೊರೊನಾ ಬಲಿ ಪಡೆದಿದೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 13ನೇ ಸ್ಥಾನದಲ್ಲಿದೆ.

Leave a Reply

Your email address will not be published. Required fields are marked *

You May Also Like

ವಿಮಾನ ಅಪಘಾತ – 22 ಜನ ವಿದ್ಯಾರ್ಥಿಗಳು ದಹನ!

ಉಕ್ರೇನ್ ನಲ್ಲಿ ಲ್ಯಾಂಡಿಂಗ್ ಆಗುವ ಸಂದರ್ಭದಲ್ಲಿ ವಿಮಾನ ಅಪಘಾತವಾದ ಪರಿಣಾಮ 22 ಜನ ವಿದ್ಯಾರ್ಥಿಗಳು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.

ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!

ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಸಿ.ಟಿ ರವಿ ಚೀಟಿ ಆಟ: ಕೊನೆಗೂ ಪಾಸಿಟಿವ್ ಅಂತೆ!

ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ್ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!