ಶಿವಮೊಗ್ಗ : ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸೋಂಕು ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ. 21 ಜನ ತಬ್ಲಿಘಿಗಳು ಸೇರಿದಂತೆ 136 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು. ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಳಲ್ಕೆರೆ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ನಿನ್ನೆ 9 ಮಂದಿ ಗುಜರಾತ್ ನ ಅಹಮದಾಬಾದ್ ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ಪೈಕಿ 8 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇವರೆಲ್ಲಾ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದವರೇ ಆಗಿದ್ದಾರೆ. ಸದ್ಯ 8 ಜನ ಕೊರೊನಾ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಕೆಲೂರು : ಅರಣ್ಯಾಧಿಕಾರಿಗಳನ್ನು ಬಂಧಿಸಲು ಸೂಚಿಸಿದೆ- ಸಚಿವ ಶ್ರೀರಾಮುಲು

ಉತ್ತರಪ್ರಭಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲರು ಒಂದು ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ…

ಶಿರಹಟ್ಟಿ: ಗ್ರಾಮ ದೇವತೆ ದ್ಯಾಮವ್ವದೇವಿಯ ಜಾತ್ರೆಗೆ ಸಂಭ್ರಮದ ತೆರೆ

ಶಿರಹಟ್ಟಿ: ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿಯ ಜಾತ್ರೆಯು ಕಳೆದ 3 ದಿನಗಳಿಂದ ಅತ್ಯಂತ ವೈಭವದಿಂದ ಜರುಗಿದ್ದು, ಗುರುವಾರ ಸಲಕ ವಾದ್ಯ ಮೇಳಗಳೊಂದಿಗೆ ದ್ಯಾಮವ್ವ ದೇವಿಯನ್ನು ಗುಡಿ ದುಂಬಿಸುವದರ ಮೂಲಕ ಜಾತ್ರೆಗೆ ಸಂಭ್ರಮದ ತೆರೆ ಎಳೆಯಲಾಯಿತು.

ಕುರಿ ಹಿಂಡಿನ ಮೇಲೆ ಹರಿದ ಕಾರು : 8 ಕುರಿಗಳು ಸಾವು, 6 ಗಂಭೀರ

ನಿಡಗುಂದಿ: ರಸ್ತೆ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ಆಕಸ್ಮಿಕವಾಗಿ ಕಾರು ಹರಿದ ಪರಿಣಾಮ 8 ಕುರಿಗಳು…

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ – ಲಕ್ಷಾಂತರ ನಷ್ಟ!

ಬೆಂಗಳೂರು : ನಗರದಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೂ. ಲಕ್ಷಾಂತರ ನಷ್ಟವಾಗಿದೆ.