ಶಿವಮೊಗ್ಗ : ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸೋಂಕು ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ. 21 ಜನ ತಬ್ಲಿಘಿಗಳು ಸೇರಿದಂತೆ 136 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು. ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಳಲ್ಕೆರೆ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ನಿನ್ನೆ 9 ಮಂದಿ ಗುಜರಾತ್ ನ ಅಹಮದಾಬಾದ್ ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ಪೈಕಿ 8 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇವರೆಲ್ಲಾ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದವರೇ ಆಗಿದ್ದಾರೆ. ಸದ್ಯ 8 ಜನ ಕೊರೊನಾ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಸೀಡಿ ಪ್ರಕರಣ : ಸಂತ್ರಸ್ತೆಗೆ ಗ್ರಾಮಸ್ಥರ ಬೆಂಬಲ

ಮಾಜಿ ಸಚಿವರ ಸಿ.ಡಿ.ಪ್ರಕರಣದ ಸಂತ್ರಸ್ತ ಯುವತಿಗೆ ತಂದೆಯ ಊರಿನಿಂದ ಬೆಂಬಲ ವ್ಯಕ್ತವಾಗಿದೆ.

ದೇಶದಲ್ಲಿ ಕೊರೊನಾ ಇನ್ನೂ ಗರಿಷ್ಠ ಮಟ್ಟಕ್ಕೆ ಹೋಗಲಿದೆಯೇ?

ನವದೆಹಲಿ : ದೇಶದಲ್ಲಿ ಸದ್ಯ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಆದರೆ, ನವೆಂಬರ್ ವೇಳೆಗೆ…

ಗದಗ ಜಿಲ್ಲೆಯ ನಾಲ್ಕು ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಇಟಗಿ ಗ್ರಾಮದ ವಾರ್ಡ ನಂ. 4ರ ಎರಡು ಪ್ರದೇಶಗಳನ್ನು, ಲಕ್ಷ್ಮೇಶ್ವರ…

ಆರ್ ಆರ್ ನಗರ, ಶಿರಾದಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ!

ಬೆಂಗಳೂರು : ರಾಜ್ಯದಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಫಲಿತಾಂಶ ಇಂದು ಹೊರ ಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿವೆ.