ನವದೆಹಲಿ: ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ಕೊರೊನಾ ಸಂಕಷ್ಟ ಮತ್ತು ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದ ದೇಶದ ಬಡವರ ಕಷ್ಟ ನಿವಾರಣೆಗಾಗಿ ಕೇಂದ್ರ ಶೀಘ್ರದಲ್ಲೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಈಗಾಗಲೇ ಕೇಂದ್ರ ಸರ್ಕಾರವು ರೂ. 1.7 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿತ್ತು . ಇದರ ಬೆನ್ನಲ್ಲೇ ಆರ್ಥಿಕತೆಯ ಸುಧಾರಣೆಗೆ ಸರ್ಕಾರ ಮುಂದಿನ ವಾರ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಪ್ಯಾಕೇಜ್ ಘೋಷಣೆ ಸಂಬಂಧ ಕಳೆದ ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ್ದು, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಪ್ರಧಾನಿ ಕಾರ್ಯಾಲಯ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕಿನಿಂದ ಗುಣ ಹೊಂದಿದ 12 ದಿನದ ಮಗುವಿನ ಹೆಸರೇನು ಗೊತ್ತಾ?

ಒಂಭತ್ತು ದಿನದ ಮಗುವಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಇದೀಗ 12 ದಿನದ ಈ ಮಗು ಕೊರೋನಾ ಸೋಂಕಿನಿಂದ ಗುಣ ಹೊಂದಿದ್ದು ಮಗುವಿಗೆ ಇಂದು ಹೆಸರಿಡಲಾಗಿದೆ.

ರಾಜ್ಯದಲ್ಲಿಂದು 141 ಕೊರೊನಾ ಪ್ರಕರಣ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು…

78 ವರ್ಷದ ಅಜ್ಜ ಮದುವೆಯಾಗಿದ್ದು 17 ವರ್ಷದ ಹುಡುಗಿಯನ್ನು!! ಮುಂದೆ ನಡೆದಿದ್ದೇನು?

ಜಕಾರ್ತಾ : 78 ವರ್ಷದ ಅಜ್ಜ 17ರ ಹುಡುಗಿಯನ್ನು ವಿವಾಹವಾಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಆದರೆ ವಿವಾಹವಾದ ಕೇವಲ 22 ದಿನಗಳಲ್ಲಿ ವಿಚ್ಛೇದನ ಪಡೆದಿದ್ದಾರೆ. ಅದೂ ಸಹ 78 ವರ್ಷದ ಅಜ್ಜನೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ವಿಶೇಷ.

ನಗರ ಸಭೆ ಚುನಾವಣೆ: 30ನೇ ವಾರ್ಡ ಕಾಂಗ್ರೇಸ್ ಪಾಲಿಗೆ

ಗದಗ ಬೇಟಗೇರಿ:ನಗರ ಸಭೆ 30ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 30ನೇ  ವಾರ್ಡನಲ್ಲಿ ಕಾಂಗ್ರೇಸಗೆ…