ಬೆಂಗಳೂರಿನತ್ತ ಮುಖ ಮಾಡಿದ ಜನರು!

ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ.

ಜನರು ಹೆಚ್ಚಾಗಿ ಬರುತ್ತಿರುವ ಕಾರಣ ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಲಾಕ್ಡೌಿನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೊಟೀಸ್ ನೀಡಿದ್ದರಿಂದಾಗಿ ಜನರು ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ.

ಲಾಕ್ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರು ಯಾವ ಭಾಗಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಕಂಟೈನ್ಮೆಂಂಟ್ ಝೋನ್ ನಲ್ಲಿಯ ಜನರು ಬೆಂಗಳೂರಿಗೆ ಬಂದರೆ ಹೇಗೆ ಎಂಬ ಆತಂಕ ಶುರುವಾಗಿದೆ. ಒಂದು ವೇಳೆ ಜನರಿಂದಾಗಿ ಮತ್ತೆ ಕೊರೊನಾ ಹೆಚ್ಚಾದರೆ ಹೇಗೆ ಎಂಬ ಆತಂಕವೂ ಮನೆ ಮಾಡುತ್ತಿದೆ.

Exit mobile version