ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ.

ಜನರು ಹೆಚ್ಚಾಗಿ ಬರುತ್ತಿರುವ ಕಾರಣ ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಲಾಕ್ಡೌಿನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೊಟೀಸ್ ನೀಡಿದ್ದರಿಂದಾಗಿ ಜನರು ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ.

ಲಾಕ್ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರು ಯಾವ ಭಾಗಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಕಂಟೈನ್ಮೆಂಂಟ್ ಝೋನ್ ನಲ್ಲಿಯ ಜನರು ಬೆಂಗಳೂರಿಗೆ ಬಂದರೆ ಹೇಗೆ ಎಂಬ ಆತಂಕ ಶುರುವಾಗಿದೆ. ಒಂದು ವೇಳೆ ಜನರಿಂದಾಗಿ ಮತ್ತೆ ಕೊರೊನಾ ಹೆಚ್ಚಾದರೆ ಹೇಗೆ ಎಂಬ ಆತಂಕವೂ ಮನೆ ಮಾಡುತ್ತಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಯಂತ್ರಣಕ್ಕಾಗಿ ನೂತನ ನಿಯಮಗಳು ಜಾರಿ

ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡನೇ ಅಲೆ ಬರದಂತೆ ನಿಯಂತ್ರಿಸಲು ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಲಾಗಿದೆ.

ನೈತಿಕ ಮೌಲ್ಯದಿಂದ ಸುಂದರ ಭವಿಷ್ಯ- ಹೇಮಗಿರಿಮಠ

ಉತ್ತರಪ್ರಭ ಸುದ್ದಿಆಲಮಟ್ಟಿ: ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಭವಿಷ್ಯ ರೂಪಗೊಳ್ಳುತ್ತದೆ ಎಂದು ಪ್ರಾಚಾರ್ಯ ಪಿ.ಎ.ಹೇಮಗಿರಿಮಠ…

ಪಕ್ಷಾಂತರಿಶಾಸಕರ ವಜಾ: ಸ್ಪೀಕರ್ ಗೆ ಅಧಿಕಾರ ಕೊಡಿ ಎಂದ ಸಿದ್ದು

ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು.

ಗ್ರಾಮ ಪಂಚಾಯತಿಗಳಿಗೆ ನೇಮಕವಾದ ಆಡಳಿತಾಧಿಕಾರಿಗಳ ಕರ್ತವ್ಯಗಳೇನು..?

ನೇಮಕಗೊಂಡ ಆಡಳಿತಾಧಿಕಾರಿಗಳ ಕರ್ತವ್ಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ.