ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ.

ಜನರು ಹೆಚ್ಚಾಗಿ ಬರುತ್ತಿರುವ ಕಾರಣ ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಲಾಕ್ಡೌಿನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೊಟೀಸ್ ನೀಡಿದ್ದರಿಂದಾಗಿ ಜನರು ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ.

ಲಾಕ್ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರು ಯಾವ ಭಾಗಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಕಂಟೈನ್ಮೆಂಂಟ್ ಝೋನ್ ನಲ್ಲಿಯ ಜನರು ಬೆಂಗಳೂರಿಗೆ ಬಂದರೆ ಹೇಗೆ ಎಂಬ ಆತಂಕ ಶುರುವಾಗಿದೆ. ಒಂದು ವೇಳೆ ಜನರಿಂದಾಗಿ ಮತ್ತೆ ಕೊರೊನಾ ಹೆಚ್ಚಾದರೆ ಹೇಗೆ ಎಂಬ ಆತಂಕವೂ ಮನೆ ಮಾಡುತ್ತಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಎರಡನೇ ಅಲೆ: ಅಧಿಕಾರಿಗಳ ಸಭೆ ಬಳಿಕೆ ಸಿಎಂ ಹೇಳಿದ್ದೇನು?

ಕೊರೊನಾ ಎರಡನೇ ಅಲೆ ಹಿನ್ನೆಲೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.

ಜೂನ್ 30ರವರೆಗೆ ಲಾಕ್ ಡೌನ್ ವಿಸ್ತರಣೆ

ಜೂನ್ 30ರವರೆಗೆ ಲಾಕ್ ಡೌನ್ ಮುಂದುವರೆಸಿ ಸರ್ಕಾರ ಆದೇಶಿಸಿದೆ. ಮುಂದುವರೆದ ಲಾಕ್ ಡೌನ್ ನಲ್ಲಿ ಏನೆಲ್ಲ ಆರಂಭವಾಗಲಿವೆ ಎನ್ನುವುದನ್ನು ಈ ಕೆಳಗೆ ನೀಡಲಾಗಿದೆ.

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…