ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಂಕಷ್ಟು ಶುರುವಾಗಿದೆ ಹೀಗಾಗಿ ಸರ್ಕಾರ ಹೊಸ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

ಕ್ವಾರಂಟೈನ್‌ ಸೇರಿದಂತೆ ಹಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮೃತದೇಹಗಳನ್ನು ರಾಜ್ಯದಲ್ಲಿ ಸಾಗಿಸಲು ಅವಕಾಶ ಇರುವುದಿಲ್ಲ. ಹೊರ ರಾಜ್ಯಗಳಲ್ಲಿ ಮೃತಪಟ್ಟ ವರ ದೇಹಗಳನ್ನೂ ರಾಜ್ಯಕ್ಕೆ ತರುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಜೊತೆಗೆ ಬೇರೆ ಬೇರೆ ದೇಶ ಹಾಗೂ ರಾಜ್ಯಗಳಿಂದ ಕನ್ನಡಿಗರು ಮರಳಿ ಬರುತ್ತಿದ್ದು, ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಎಂಬ ಕುರಿತು ಕೂಡ ಸರ್ಕಾರ ಹೇಳಿದೆ.

ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬರುವವರಿಗೆ, ಅನಿವಾರ್ಯ ಸಂದರ್ಭಗಳಲ್ಲಿ ಮೃತದೇಹಗಳನ್ನು ತರುವವರಿಗೆ ಹಲವು ಷರತ್ತುಗಳನ್ನು ಹಾಕಲಾಗಿದೆ. ಷರತ್ತುಗಳನ್ನು ಪಾಲಿಸಲು ಒಪ್ಪಿಕೊಳ್ಳುವವರಿಗೆ ಮಾತ್ರ ಅನುಮತಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಆನ್‌ಲೈನ್‌ ನೋಂದಣಿ ಖಡ್ಡಾಯ : ಹೊರ ರಾಜ್ಯದಿಂದ ರಾಜ್ಯಕ್ಕೆ ಬರುವ ಕನ್ನಡಿಗರು‌ ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು. ಹೀಗಾಗಿ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಲೇಬೇಕು ಎಂದು ಸೂಚಿಸಿದೆ.

Leave a Reply

Your email address will not be published. Required fields are marked *

You May Also Like

ಮುತ್ತಪ್ಪ ರೈ ಗನ್ ಮ್ಯಾನ್ ಗಳನ್ನು ಬಂಧಿಸಿದ್ದೇಕೆ?

ಬೆಂಗಳೂರು: ಮಾಜಿ ಡಾನ್, ಉದ್ಯಮಿ ಮುತ್ತಪ್ಪ ರೈ ಅಂತ್ಯ ಸಂಸ್ಕಾರವು ಅವರ ನಿವಾಸ ಬಿಡದಿಯ ತೋಟದಲ್ಲಿ…

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ…

ಕಮಲ ಕೈಯಲ್ಲಿ ಹಿಡಿದ ರಾಜರಾಜೇಶ್ವರಿ – ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ!

ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ಸನಿಹಕ್ಕೆ ಬಂದು ನಿಂತಿದ್ದಾರೆ.