ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಮುಗಿಯಲು ಇನ್ನೂ 7 ದಿನಗಳು ಬಾಕಿ ಇವೆ. ಈ ಸಮಯದಲ್ಲಿ ಸದ್ಯ ಮುಂದಿನ ದೇಶದ ಸ್ಥಿತಿ ಹೇಗಿರುತ್ತದೆ ಎಂಬ ಕುರಿತು ಚರ್ಚೆಗಳು ನಡೆಯುತ್ತಿವೆ.

ಒಂದು ವೇಳೆ ಲಾಕ್ ಡೌನ್ ಮುಂದುವರೆಸಿದರೆ, ಏನಿರುತ್ತದೆ ಎಂಬ ಕುರಿತು ಚರ್ಚೆಗಳು ಶುರುವಾಗಿವೆ. ಲಾಕ್ಡೌಲನ್ ಮುಗಿದರೆ, ವೈರಸ್ ಹಬ್ಬಿದರೆ ಏನು ಗತಿ? ಎಂಬ ಕುರಿತು ಕೂಡ ಚರ್ಚೆಗಳು ಪ್ರಾರಂಭವಾಗಿವೆ. ಈ ಎಲ್ಲ ಲೆಕ್ಕಾಚಾರದ ನಡುವೆ ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. 

ಅಲ್ಲದೇ, ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಮಧ್ಯಾಹ್ನ 2ಕ್ಕೆ ಸಚಿವರು, ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ರಾಜ್ಯದ ಕೊರೋನಾ ಪ್ರಕರಣ, ಲಾಕ್ಡೌ ನ್ ನಿರ್ಬಂಧ, ಲಾಕ್ಡೌಂನ್ ಸಡಿಲಿಕೆ, ನಿರ್ವಹಣೆಗಳ ಬಗ್ಗೆ ವಿವರ ಪಡೆಯಲಿದ್ದಾರೆ.

ಒಂದು ವೇಳೆ ಲಾಕ್ ಡೌನ್ ಮುಂದುವರೆದರೂ ರಾಜ್ಯದಲ್ಲಿ ಹಲವು ಮಾರ್ಗಸೂಚಿಗಳನ್ನು ಕೈಗೊಳ್ಳಬಹುದು ಎನ್ನಲಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಅಂತರ್ ಜಿಲ್ಲಾ ಸಾರಿಗೆಗೆ ಅವಕಾಶ ಸಾಧ್ಯತೆಯಿದೆ. ಕಂಟೈನ್ಮೆಂಟ್ ಝೋನ್ ಬಿಟ್ಟು ಉಳಿದೆಡೆ ಸಾರಿಗೆ ಸಂಚಾರಕ್ಕೆ ಅವಕಾಶ ನೀಡಬಹುದು. 

ಸರ್ಕಾರಿ, ಖಾಸಗಿ ಬಸ್, ಆಟೋ ರಿಕ್ಷಾ, ಟ್ಯಾಕ್ಸಿಗೆ ಅವಕಾಶ ಸಿಗಬಹುದು. ಶೇ. 50 ರಷ್ಟು ಬಸ್, ಪ್ರಯಾಣಿಕರಿಗೆ ಸಂಚರಿಸಲು ಅವಕಾಶ ನೀಡಬಹುದು. ಶಾಪಿಂಗ್ ಮಾಲ್, ಥಿಯೇಟರ್‍ ಗಳಿಗೆ ನಿರ್ಬಂಧ ಹೇರುವ ಸಾಧ್ಯದೆ ಇದೆ. ಧಾರಾವಾಹಿ, ಸಿನಿಮಾ ಹೊರಾಂಗಣ ಶೂಟಿಂಗ್ಗೂನ ನಿರ್ಬಂಧ ಮುಂದುವರಿಸಬಹುದು.

ದೇಗುಲ, ದೇವರ ಜಾತ್ರೆ, ಸಂತೆ, ಉತ್ಸವಗಳಿಗೆ ಬಹುತೇಕ ನಿರ್ಬಂಧ ಇರಬಹುದು. ಸರ್ಕಾರಿ, ಖಾಸಗಿ ಸಭೆ, ಸಮಾರಂಭಗಳಿಗೂ ಅವಕಾಶ ಕೊಡದಿರಬಹುದು. ಜೂನ್ ಮಧ್ಯಭಾಗ ಅಥವಾ ಜುಲೈನಲ್ಲಿ ಶಾಲಾ-ಕಾಲೇಜುಗಳ ಆರಂಭ ಆಗಬಹುದು.

Leave a Reply

Your email address will not be published. Required fields are marked *

You May Also Like

ನಾಲ್ಕ ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ : ನಾಲ್ಕು ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ-ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ…

ಗದಗ ಜಿಲ್ಲೆಯಲ್ಲಿ 2 ಸಾವಿರ ತೋಟ ನಿರ್ಮಾಣ ಗುರಿ: ಜಿ.ಪಂ ಅಧ್ಯಕ್ಷ ರಾಜೂಗೌಡ

ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 2 ಸಾವಿರ ಹೊಸ ತೋಟಗಳನ್ನು ನಿರ್ಮಿಸಲು ತೋಟಗಾರಿಕೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜೂಗೌಡ ಕೆಂಚನಗೌಡ್ರ ಸೂಚಿಸಿದರು.

ಕೋವಿಡ್-19 ಗದಗ ಜಿಲ್ಲೆ : ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಗದಗ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕು ಸಕಾರಾತ್ಮಕ ಕಂಡುಬ0ದ ಪ್ರದೇಶಗಳನ್ನು ಪ್ರತಿಬಂಧಿತÀ ಪ್ರದೇಶಗಳನ್ನಾಗಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಘೋಷಿಸಿದ್ದಾರೆ.