ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಮುಗಿಯಲು ಇನ್ನೂ 7 ದಿನಗಳು ಬಾಕಿ ಇವೆ. ಈ ಸಮಯದಲ್ಲಿ ಸದ್ಯ ಮುಂದಿನ ದೇಶದ ಸ್ಥಿತಿ ಹೇಗಿರುತ್ತದೆ ಎಂಬ ಕುರಿತು ಚರ್ಚೆಗಳು ನಡೆಯುತ್ತಿವೆ.

ಒಂದು ವೇಳೆ ಲಾಕ್ ಡೌನ್ ಮುಂದುವರೆಸಿದರೆ, ಏನಿರುತ್ತದೆ ಎಂಬ ಕುರಿತು ಚರ್ಚೆಗಳು ಶುರುವಾಗಿವೆ. ಲಾಕ್ಡೌಲನ್ ಮುಗಿದರೆ, ವೈರಸ್ ಹಬ್ಬಿದರೆ ಏನು ಗತಿ? ಎಂಬ ಕುರಿತು ಕೂಡ ಚರ್ಚೆಗಳು ಪ್ರಾರಂಭವಾಗಿವೆ. ಈ ಎಲ್ಲ ಲೆಕ್ಕಾಚಾರದ ನಡುವೆ ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. 

ಅಲ್ಲದೇ, ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಮಧ್ಯಾಹ್ನ 2ಕ್ಕೆ ಸಚಿವರು, ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ರಾಜ್ಯದ ಕೊರೋನಾ ಪ್ರಕರಣ, ಲಾಕ್ಡೌ ನ್ ನಿರ್ಬಂಧ, ಲಾಕ್ಡೌಂನ್ ಸಡಿಲಿಕೆ, ನಿರ್ವಹಣೆಗಳ ಬಗ್ಗೆ ವಿವರ ಪಡೆಯಲಿದ್ದಾರೆ.

ಒಂದು ವೇಳೆ ಲಾಕ್ ಡೌನ್ ಮುಂದುವರೆದರೂ ರಾಜ್ಯದಲ್ಲಿ ಹಲವು ಮಾರ್ಗಸೂಚಿಗಳನ್ನು ಕೈಗೊಳ್ಳಬಹುದು ಎನ್ನಲಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಅಂತರ್ ಜಿಲ್ಲಾ ಸಾರಿಗೆಗೆ ಅವಕಾಶ ಸಾಧ್ಯತೆಯಿದೆ. ಕಂಟೈನ್ಮೆಂಟ್ ಝೋನ್ ಬಿಟ್ಟು ಉಳಿದೆಡೆ ಸಾರಿಗೆ ಸಂಚಾರಕ್ಕೆ ಅವಕಾಶ ನೀಡಬಹುದು. 

ಸರ್ಕಾರಿ, ಖಾಸಗಿ ಬಸ್, ಆಟೋ ರಿಕ್ಷಾ, ಟ್ಯಾಕ್ಸಿಗೆ ಅವಕಾಶ ಸಿಗಬಹುದು. ಶೇ. 50 ರಷ್ಟು ಬಸ್, ಪ್ರಯಾಣಿಕರಿಗೆ ಸಂಚರಿಸಲು ಅವಕಾಶ ನೀಡಬಹುದು. ಶಾಪಿಂಗ್ ಮಾಲ್, ಥಿಯೇಟರ್‍ ಗಳಿಗೆ ನಿರ್ಬಂಧ ಹೇರುವ ಸಾಧ್ಯದೆ ಇದೆ. ಧಾರಾವಾಹಿ, ಸಿನಿಮಾ ಹೊರಾಂಗಣ ಶೂಟಿಂಗ್ಗೂನ ನಿರ್ಬಂಧ ಮುಂದುವರಿಸಬಹುದು.

ದೇಗುಲ, ದೇವರ ಜಾತ್ರೆ, ಸಂತೆ, ಉತ್ಸವಗಳಿಗೆ ಬಹುತೇಕ ನಿರ್ಬಂಧ ಇರಬಹುದು. ಸರ್ಕಾರಿ, ಖಾಸಗಿ ಸಭೆ, ಸಮಾರಂಭಗಳಿಗೂ ಅವಕಾಶ ಕೊಡದಿರಬಹುದು. ಜೂನ್ ಮಧ್ಯಭಾಗ ಅಥವಾ ಜುಲೈನಲ್ಲಿ ಶಾಲಾ-ಕಾಲೇಜುಗಳ ಆರಂಭ ಆಗಬಹುದು.

Leave a Reply

Your email address will not be published. Required fields are marked *

You May Also Like

ಸೇವಾ ಸಿಂಧುಗಾಗಿ ಸರತಿಯಲ್ಲಿ ಚಪ್ಪಲಿ ಇಟ್ಟು ಕಾದು ಕುಳಿತ ಕಾರ್ಮಿಕರು

ಬಿಸಿಲಿನ ತಾಪ ಹೆಚ್ಚಿದ ಹಿನ್ನೆಲೆಯಲ್ಲಿ ಜನರು ಸಾಲಿನಲ್ಲಿ ನಿಲ್ಲಲಾಗದೆ ತಮ್ಮ ಚಪ್ಪಲಿಗಳನ್ನು ಗುರುತಿಗಾಗಿ ಇಡುತ್ತಿರುವುದು ಹಾಗೂ ಭಾಷಾ ಸಮಸ್ಯೆ ಯಿಂದ ಸೇವಾ ಸಿಂಧು ಅರ್ಜಿ ಸಲ್ಲಿಸಲು ಕಾರ್ಮಿಕರು ಸುಸ್ತಾಗುತ್ತಿದ್ದಾರೆ.

ಪಾಕ್ ಸೇನೆಯಿಂದ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿಯಿರುವ ಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಸೇನೆಯು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದರು.

ಶುಂಠಿ ವ್ಯಾಪಾರಿಯಿಂದ ಮುಂಡರಗಿ ಪೊಲೀಸ್ ಸ್ಟೇಶನ್ ಗೆ ಸೋಂಕಿನ ಸಂಕಟ..!

ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ…

ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಮಾಡುವುದು ಹೇಗೆ.?

ಗದಗ: ಹೆಸರು ಹಾಗೂ ಗೋವಿನ ಜೋಳ ಬಿತ್ತನೆಯಾಗಿದ್ದು, ಈಗಾಗಲೇ ಹೆಸರು ಹೂವಾಡುವ ಹಂತ ಹಾಗೂ ಗೋವಿನ ಜೋಳ ಸುಮಾರು 30 ರಿಂದ 40 ದಿವಸದ ಬೆಳೆ ಇರುತ್ತವೆ. ಹೆಸರು ಬೆಳೆಯಲ್ಲಿ ವಿವಿದೆಡೆ ಹಳದಿ ರೋಗ ಮತ್ತು ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೇ ಹೆಚ್ಚಿದೆ. ಗದಗ ತಾಲೂಕಿನ ಉಪ ಕೃಷಿ ನಿರ್ದೇಶಕ ವೀರೇಶ ಹುನಗುಂದ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಅಡವಿ ಸೋಮಾಪೂರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿತು. ಹೆಸರು ಬೆಳೆಯಲ್ಲಿ ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು.