ಬೆಂಗಳೂರು: ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ಮರಳುತ್ತಿದ್ದು, ನಗರಕ್ಕೆ ಇಂದು 326 ಜನ ಕನ್ನಡಿಗರು ಆಗಮಿಸಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗಿನ ಜಾವ 4.47ಕ್ಕೆ ಕನ್ನಡಿಗರು ಆಗಮಿಸಿದ್ದಾರೆ. ವಿಮಾನವು ಲಂಡನ್ ನಿಂಜ ದೆಹಲಿಗೆ ಬಂದು ಅಲ್ಲಿಂ ಬೆಂಗಳೂರಿಗೆ ಆಗಮಿಸಿದೆ.

ವೈದ್ಯರ ತಂಡ ವಿಮಾನ ನಿಲ್ದಾಣದಲ್ಲಿಯೇ ಎಲ್ಲರನ್ನು ಸಾಮಾಜಿಕ ಅಂತರದ ಮೂಲಕ ಥರ್ಮಲ್ ಸ್ಕ್ರೀನಿಂಗ್ ಮಾಡುತ್ತಿದ್ದಾರೆ. ಸ್ಕ್ರೀನಿಂಗ್ ನಡೆಸಿದ ಬಳಿಕ ಒಂದೊಂದು ಬಸ್ಸಿನಲ್ಲಿ 20 ಜನ ಪ್ರಯಾಣಿಕರು, ಪೊಲೀಸರು, ವೈದ್ಯರನ್ನು ತಂಡಗಳಾಗಿ ವಿಂಗಡಣೆ ಮಾಡಲಾಗುತ್ತಿದೆ. ನಂತರ ಪೊಲೀಸರ ಭದ್ರತೆಯಲ್ಲಿ ನಗರದ ನಿಗದಿತ ಕ್ವಾರಂಟೈನ್ ಹೋಟೆಲ್ಗಿಳಿಗೆ ಕನ್ನಡಿಗರನ್ನು ಕಳಿಸಿಕೊಡಲಾಗುತ್ತದೆ.

ಬೆಂಗಳೂರು ಗ್ರಾಮಾಂತರ ಡಿಸಿ ರವೀಂದ್ರ, ಈಶಾನ್ಯ ವಲಯ ಡಿಸಿಪಿ ಭೀಮಾ ಶಂಕರ್ ಗೂಳೆದ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.

ಹೊರ ರಾಜ್ಯದಲ್ಲಿರುವ 56 ಸಾವಿರ ಜನ ಕನ್ನಡಿಗರ ಪೈಕಿ, 4 ಸಾವಿರಕ್ಕೂ ಹೆಚ್ಚು ಕನ್ನಡಿಗರು ಶೀಘ್ರದಲ್ಲಿಯೇ ತವರಿಗೆ ಬರಲಿದ್ದಾರೆ. ವಿದ್ಯಾರ್ಥಿಗಳು, ಪ್ರವಾಸಿಗರು, ಉದ್ಯೋಗಕ್ಕೆ ತೆರಳಿದವರು ಈಗಾಗಲೇ ಆಯಾ ಜಿಲ್ಲೆ ಡಿಸಿ, ನೋಡಲ್ ಅಧಿಕಾರಿಗಳ ಬಳಿ ನೋಂದಣಿ ಮಾಡಿಸಿಕೊಂಡಿದ್ದಾರೆ.

ವಿದೇಶದಿಂದ ತವರಿಗೆ ಬರುವುದಕ್ಕೆ ಸುಮಾರು 6.100 ಕನ್ನಡಿಗರು ಸಿದ್ಧರಿದ್ದಾರೆ. ಇವರು ಉಳಿದುಕೊಳ್ಳಲು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಹೊಟೇಲ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. 18 ಪಂಚತಾರಾ ಹೋಟೆಲ್, 25 ತ್ರಿ ಸ್ಟಾರ್ ಹೋಟೆಲ್ಗೇಳು ಬುಕ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಹೌಸ್ಫುಲ್.. ಹೌಸ್ಫುಲ್..! ಅದ್ಧೂರಿ ಎಂಟ್ರಿ ಕೊಟ್ಟ ಪೊಗರು

ಖುಷ್ತ್ರಿಭಾಷೆಯಲ್ಲಿ ಬಿಡುಗಡೆಯಾದ ಪೊಗರು ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಶುಕ್ರವಾರ ತೆರೆಕಂಡ ಪೊಗರು ಶಿವನಿಗೆ ಅಭಮಾನಿಗಳು ಫಿದಾ ಆಗಿದ್ದಾರೆ.

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆಗಿದೆ.

ಮಳೆಗೆ ರಸ್ತೆ ಕುಸಿತ : ದುರಸ್ತೆಗೆ ಆಗ್ರಹ

ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.