ಬೆಂಗಳೂರು: ಫೈನಾನ್ಸ್ ನಡೆಸುತ್ತಿದ್ದ ವ್ಯಕ್ತಿಯ ಅಪಹರಣಕ್ಕೆ ಜೈಲಿನಲ್ಲಿದ್ದ ರೌಡಿ ಪ್ರಯತ್ನಿಸಿದ ಘಟನೆ ನಡೆದಿದೆ. ಇಲ್ಲಿಯ ಕಗ್ಗಲೀಪುರ ಠಾಣಾ ವ್ಯಾಪ್ತಿಯ ಗುಳಕಮಲೆ ನಿವಾಸಿ ಮಂಜ ಅಲಿಯಾಸ್ ಬೋಂಡ ಮಂಜ ಪರಪ್ಪನ ಅಗ್ರಹಾರದಿಂದಲೇ ಕಿಡ್ನಾಪ್ಗೆ ಸಂಚು ರೂಪಿಸಿ, ತನ್ನ ಚೇಲಾಗಳ ಮೂಲಕ ಅದನ್ನು ಕಾರ್ಯರೂಪಕ್ಕೆ ತಂದಿದ್ದಾನೆ.

ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಸಿ.ಕೆ.ಪಾಳ್ಯದಲ್ಲಿ ಫೈನಾನ್ಸ್ ವ್ಯವಹಾರ ಹಾಗೂ ರಿಯಲ್ ಎಸ್ಟೇಟ್  ಮಾಡಿಕೊಂಡಿದ್ದ ರವಿ ಎಂಬಾತನಿಗೆ ಬೋಂಡ ಮಂಜ ಹಣದ ಬೇಡಿಕೆ ಇಟ್ಟಿದ್ದ. ಹಣ ನೀಡಲು ರವಿ ನಿರಾಕರಿಸಿದ್ದರಿಂದ ಕಿಡ್ನ್ಯಾಪ್ ಸಂಚು ರೂಪಿಸಿದ್ದ. ಶನಿವಾರ ಸಂಜೆ ಕಾರ್ ಹಾಗೂ ದ್ವಿಚಕ್ರ ವಾಹನದಲ್ಲಿ ಬಂದ 6 ಜನರ ತಂಡ ರವಿಯನ್ನ ಅಪಹರಿಸಿ ಕನಕಪುರದ ಕಗ್ಗಲಿಪುರ ರಸ್ತೆಯತ್ತ ಎಳೆದೊಯ್ದಿದ್ದಾರೆ. ಬಳಿಕ ರವಿ ಬಳಿಯಿದ್ದ ರೂ. 3 ಸಾವಿರ ರೂಪಾಯಿ ಹಾಗೂ ಎಟಿಎಂನಲ್ಲಿದ್ದ ರೂ. 3.5 ಸಾವಿರ ಕಿತ್ತುಕೊಂಡಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ತರುವಂತೆ ಹೆಂಡತಿಗೆ ಸೂಚಿಸುವಂತೆ ರವಿಗೆ ಬೆದರಿಕೆ ಹಾಕಿದ್ದಾರೆ.

ಈ ಕುರಿತು ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಪಿಗಳು ರವಿಯನ್ನು ಬಿಟ್ಟು, ಒಂದು ವಾರದೊಳಗೆ ರೂ. 1 ಲಕ್ಷ ತರಬೇಕು. ಈ ವಿಷಯವನ್ನು ಪೊಲೀಸರಿಗೆ ತಿಳಿಸಬಾರದು ಎಂದು ಹೇಳಿ ಕಳುಹಿಸಿಕೊಟ್ಟಿದ್ದಾರೆ. ರವಿ ಕೂಡ ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದು, ರೌಡಿಗಳ ಜೊತೆ ಆಗಾಗ ಪಾರ್ಟಿ ಮಾಡುತ್ತಿದ್ದ. ಇದರಿಂದಾಗಿ ಆತನ ಬಳಿ ಹಣವಿದೆ ಎಂದು ಬೋಂಡ ಮಂಜ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. ಈ ಬಾರಿಯೂ ಸಹ ಹಣಕ್ಕಾಗಿ ಬೇಡಿಕೆ ಇಟ್ಟಾಗ ರವಿ ನಿರಾಕರಿಸಿದ್ದ. ಹೀಗಾಗಿ ತನ್ನ ಸಹಚರರನ್ನು ಬಿಟ್ಟು ಈ ಕೆಲಸ ಮಾಡಿಸಿದ್ದಾನೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಸದ್ಯ, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಘ್ರ ಆರಂಭವಾಗಲಿವೆ ದೇವಸ್ಥಾನಗಳು?

ಮುಂದಿನ ವಾರದಿಂದ ಭಕ್ತರಿಗೆ ದೇವರು ದರ್ಶನ ಕರುಣಿಸುವ ಸಾಧ್ಯತೆ ಇದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗುತ್ತಿದ್ದು ತೀರ್ಥ, ಪ್ರಸಾದಗಳಿಗೆ ಬ್ರೇಕ್ ಬೀಳುವ ಸಾದ್ಯತೆ ಇದೆ.

ಆಸ್ಪತ್ರೆಯ ಮುಂದೆಯೇ ಮಹಿಳೆಯ ತಲೆಯಮೇಲೆ ಹರಿದ ಟ್ರಾಕ್ಟರ್

ಸ್ಕೂಟಿ ಮೇಲೆ ಹೋಗುತ್ತಿದ್ದ ಮಹಿಳೆಯೊಬ್ಬರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ, ಹಿಂಬಾಗದಲ್ಲಿದ್ದ ಟ್ರಾಕ್ಟರ್ ಮಹಿಳೆಯ ತಲೆಯ ಮೇಲೆ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಬಿ ಆರ್ ಪಾಟೀಲ್ ಆಸ್ಪತ್ರೆಯ ಮುಂಬಾಗದಲ್ಲಿ ನಡೆದಿದೆ.

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.

ನಮ್ಮ ಕರವೇ ಗ್ರಾಮ ಘಟಕ ಉದ್ಘಾಟನೆ

ತಾಲೂಕಿನ ಉಪ್ಪಾರ ಬುದ್ದಿನಿ ಗ್ರಾಮದಲ್ಲಿ ನಮ್ಮ‌ ಕರವೇ ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಘಟಕ ನಮ್ಮ ಕರವೇ ಅಧ್ಯಕ್ಷ ಬಸವರಾಜ ಉದ್ಬಾಳ ಅವರು ಮಾತನಾಡಿ, ನಾಡು ನುಡಿ, ಜಲ, ಭಾಷೆ ರಕ್ಷಣೆಗೆ ನಮ್ಮ ಕರವೇ ಕಾರ್ಯಕರ್ತರು ಬದ್ದರಾಗಿರಬೇಕೆಂದು ಹೇಳಿದರು.