ಬೆಂಗಳೂರು: ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ಆದೇಶದ ಮೇರೆಗೆ ರಿಜಿಸ್ಟ್ರಾರ್‌ ಜನರಲ್‌ ರಾಜೇಂದ್ರ ಬದಾಮಿಕರ್‌ ಈ ಸೂಚನೆ ಹೊರಡಿಸಿದ್ದಾರೆ.

ಏ. 21ರಂದು ಕೊರೊನಾಗೆ ಸಂಬಂಧಿಸಿದ ಸಲಹೆ ಮತ್ತು ಸೂಚನೆಗಳ ಕುರಿತು ಹೈಕೋರ್ಟ್ ಸೂಚನೆ ಹೊರಡಿಸಿತ್ತು. ಈ ಸಲಹೆ, ಸೂಚನೆಗಳನ್ನು ಹೈಕೋರ್ಟ್‌ ಸಹಿತ ರಾಜ್ಯದ ಎಲ್ಲ ನ್ಯಾಯಾಲಯಗಳ ಅಧಿಕಾರಿಗಳು ಮತ್ತು ಸಿಬಂದಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಗಿತ್ತು.

ಈಗ ಮತ್ತೊಂದು ಸುತ್ತೋಲೆ ಹೊರಡಿಸಿರುವ ಹೈಕೋರ್ಟ್‌ ಈ ಹಿಂದೆ ತಿಳಿಸಿರುವ ಸೂಚನೆಗಳನ್ನು ಅಧಿಕಾರಿಗಳು ಅಥವಾ ಸಿಬಂದಿ ಉಲ್ಲಂಘಿಸಿದರೆ ಅದನ್ನು ಸೇವಾ ದುರ್ನಡತೆ ಎಂದು ಪರಿಗಣಿಸಿ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಪಿಯು ಪರೀಕ್ಷೆಗೆ ನಿಯಮವೇನು?

ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.

ಪಾಸಿಟಿವ್ ಗರ್ಭಿಣಿಗೆ ಸಿಸೇರಿನ್: ಗದಗ ಜಿಮ್ಸ್ ನ ಅಪರೂಪದ ಸಾಧನೆ

ಗದಗ: ಇದು ಗದಗಿನ ಜಿಮ್ಸ್ ವೈದ್ಯರು ನಡೆಸಿದ ‘ಆಪರೇಷನ್ ಪಾಸಿಟಿವ್’ ಕಾರ್ಯಾಚರಣೆ. ಶುಕ್ರವಾರವಷ್ಟೇ ಪಾಸಿಟಿವ್ ದೃಢಪಟ್ಟಿದ್ದ…

ಒಳ್ಳೆ ಕಥೆ ಸಿಕ್ರೆ ಶಿವಣ್ಣ-ಪುನಿತ್ ಬೆಳ್ಳಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ತಾರಂತೆ

ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಯಾವಾಗ? ಎಂದು ಕೆಲವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವರಾಜಕುಮಾರ್, ನೂರಕ್ಕೆ ನೂರು ನಾನು ಮತ್ತು ಪುನೀತ್ ರಾಜ್‌ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತೀವಿ ಅಂದ್ರು ಶಿವಣ್ಣ..

ಗಡಿಯಲ್ಲಿ ಕ್ಯಾತೆ ಆರಂಭಿಸಿದ ಚೀನಾ!

ನವದೆಹಲಿ: ಉತ್ತರ ಸಿಕ್ಕಿಂ ನಲ್ಲಿ ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಕ್ಯಾತಿ ತೆಗೆದಿದ್ದಾರೆ. ಪರಿಣಾಮವಾಗಿ ಭಾರತೀಯ…