ಬೆಂಗಳೂರು: ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ಆದೇಶದ ಮೇರೆಗೆ ರಿಜಿಸ್ಟ್ರಾರ್‌ ಜನರಲ್‌ ರಾಜೇಂದ್ರ ಬದಾಮಿಕರ್‌ ಈ ಸೂಚನೆ ಹೊರಡಿಸಿದ್ದಾರೆ.

ಏ. 21ರಂದು ಕೊರೊನಾಗೆ ಸಂಬಂಧಿಸಿದ ಸಲಹೆ ಮತ್ತು ಸೂಚನೆಗಳ ಕುರಿತು ಹೈಕೋರ್ಟ್ ಸೂಚನೆ ಹೊರಡಿಸಿತ್ತು. ಈ ಸಲಹೆ, ಸೂಚನೆಗಳನ್ನು ಹೈಕೋರ್ಟ್‌ ಸಹಿತ ರಾಜ್ಯದ ಎಲ್ಲ ನ್ಯಾಯಾಲಯಗಳ ಅಧಿಕಾರಿಗಳು ಮತ್ತು ಸಿಬಂದಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಗಿತ್ತು.

ಈಗ ಮತ್ತೊಂದು ಸುತ್ತೋಲೆ ಹೊರಡಿಸಿರುವ ಹೈಕೋರ್ಟ್‌ ಈ ಹಿಂದೆ ತಿಳಿಸಿರುವ ಸೂಚನೆಗಳನ್ನು ಅಧಿಕಾರಿಗಳು ಅಥವಾ ಸಿಬಂದಿ ಉಲ್ಲಂಘಿಸಿದರೆ ಅದನ್ನು ಸೇವಾ ದುರ್ನಡತೆ ಎಂದು ಪರಿಗಣಿಸಿ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಮ್ಸ್ ಯಡವಟ್ಟು : ಕೊರೊನಾ ಸೋಂಕಿತರ ಲೀಸ್ಟ್ ಲೀಕ್ ಔಟ್…?

ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಸಾವನ್ನಪ್ಪಿದ ವೈದ್ಯ!

ಹಾಸನ: ಕೊರೊನಾ ವಿರುದ್ಧ ಹೋರಾಡುತ್ತಿದ್ದ ವೈದ್ಯ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಕಿರಣ್…

ತಾಯಿಯನ್ನು ಜೀವಂತವಾಗಿಯೇ ಹೂತಿದ್ದ ಪಾಪಿ ಮಗ!

ಪಾಪಿ ಮಗನೊಬ್ಬ ತನ್ನ 79 ವರ್ಷದ ತನ್ನ ತಾಯಿಯನ್ನು ಜೀವಂತವಾಗಿಯೇ ಸಮಾಧಿ ಮಾಡಿರುವ ಘಟನೆ ನಡೆದಿದೆ.

ನವದೆಹಲಿ : ದೇಶದ ಮೆಟ್ರೋ ನಗರಗಳು ರೆಡ್ ಜೋನ್ ನಲ್ಲಿ: ಆರೋಗ್ಯ ಸಚಿವಾಲಯ ನಿರ್ಧಾರ

ದೇಶದಲ್ಲಿನ ಎಲ್ಲ ಮೆಟ್ರೋ ನಗರಗಳನ್ನು ರೆಡ್ ಜೋನ್ ನಲ್ಲಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.