ಬೆಂಗಳೂರು: ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ಆದೇಶದ ಮೇರೆಗೆ ರಿಜಿಸ್ಟ್ರಾರ್‌ ಜನರಲ್‌ ರಾಜೇಂದ್ರ ಬದಾಮಿಕರ್‌ ಈ ಸೂಚನೆ ಹೊರಡಿಸಿದ್ದಾರೆ.

ಏ. 21ರಂದು ಕೊರೊನಾಗೆ ಸಂಬಂಧಿಸಿದ ಸಲಹೆ ಮತ್ತು ಸೂಚನೆಗಳ ಕುರಿತು ಹೈಕೋರ್ಟ್ ಸೂಚನೆ ಹೊರಡಿಸಿತ್ತು. ಈ ಸಲಹೆ, ಸೂಚನೆಗಳನ್ನು ಹೈಕೋರ್ಟ್‌ ಸಹಿತ ರಾಜ್ಯದ ಎಲ್ಲ ನ್ಯಾಯಾಲಯಗಳ ಅಧಿಕಾರಿಗಳು ಮತ್ತು ಸಿಬಂದಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಗಿತ್ತು.

ಈಗ ಮತ್ತೊಂದು ಸುತ್ತೋಲೆ ಹೊರಡಿಸಿರುವ ಹೈಕೋರ್ಟ್‌ ಈ ಹಿಂದೆ ತಿಳಿಸಿರುವ ಸೂಚನೆಗಳನ್ನು ಅಧಿಕಾರಿಗಳು ಅಥವಾ ಸಿಬಂದಿ ಉಲ್ಲಂಘಿಸಿದರೆ ಅದನ್ನು ಸೇವಾ ದುರ್ನಡತೆ ಎಂದು ಪರಿಗಣಿಸಿ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಜುಲೈ 29 ಅಂತರರಾಷ್ಟ್ರೀಯ ಹುಲಿಗಳ ದಿನ “ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ”

“ಇಡೀ ಪ್ರಪಂಚದ ಅತ್ಯಂತ ಭವ್ಯವಾದ ಜೀವಿ, ಹುಲಿ” ಎಂದು ಜ್ಯಾಕ್ ಹನ್ನಾ ಹೇಳಿದ ಮಾತು ನಿಜಕ್ಕೂ…

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.

ಕಾಲುವೆಗೆ ಜಾರಿದ ಕಾರು – ನಾಲ್ವರ ಸಾವು!

ಜೈಪುರ : ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಆನದ ಹನುಮಾನ್ ನಗರ ಜಿಲ್ಲೆಯಲ್ಲಿ ನಡೆದಿದೆ.