ಬೆಂಗಳೂರು: ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ -1 ಚಿತ್ರ ಅದ್ಭುತ ಯಶಸ್ಸು ಗಳಿಸಿದೆ. ಅಲ್ಲದೇ, ಚಾಪ್ಟರ್ -2 ಸಹ ಬಿಡುಗಡೆಗಾಗಿ ದಿನಗಣನೆ ಪ್ರಾರಂಭಗೊಂಡಿದೆ. ಈ ನಡುವೆ ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.

ತೆಲುಗು ವಾಹಿನಿ ಎವರಿ (Every) ಎಂಬ ಸ್ಥಳೀಯ ಚಾನಲ್ ಒಂದರಲ್ಲಿ ಕೆಜಿಎಫ್ ಚಾಪ್ಟರ್- 1 ರ ತೆಲುಗು ಅವತರಣಿಕೆಯನ್ನು ಅಕ್ರಮವಾಗಿ ಪ್ರಸಾರ ಮಾಡಿದೆ ಎನ್ನಲಾಗಿದೆ. ಸದ್ಯ ಚಾನಲ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿರುವ ಚಿತ್ರ ವಿತರಕ ಕಾರ್ತಿಕ್ ಗೌಡ ತಮ್ಮ ಟ್ವಿಟ್ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಕೆಜಿಎಫ್ ಚಿತ್ರದ ಸ್ಯಾಟಲೈಟ್ ಹಕ್ಕುಗಳ ಬಗೆಗಿನ ಮಾತುಕತೆ ಅಂತಿಮ ಹಂತದಲ್ಲಿರುವ ವೇಳೆ ಈ ಘಟನೆ ನಡೆದಿದೆ. ನಾವು ಈ ಕುರಿತು ಕಾನೂನು ಹೋರಾಟ ನಡೆಸಲಿದ್ದೇವೆ. ನಮ್ಮ ಬಳಿ ಟಿವಿ ಚಾನಲ್ ಚಿತ್ರ ಪ್ರಸಾರ ಮಾಡಿದ್ದರ ಬಗೆಗಿನ ಸ್ಕ್ರೀನ್ ಶಾಟ್, ವಿಡಿಯೋ ಸಾಕ್ಷಿಗಳಿದೆ” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಣತನಕ್ಕೆ ಶಾಸಕ ಎಚ್ಕೆ ಪಾಟೀಲರ ಜಾಣ ಉತ್ತರ

ಸಾರ್ವಜನಿಕ ಲೆಕ್ಕ ಪತ್ರ ಸಮೀತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಸಭೆ ನಡೆಸುವ ಕುರಿತು ಪತ್ರ ಬರೆದಿದ್ದರೂ ಅವರ ಆಪ್ತ ಕಾರ್ಯದರ್ಶಿ ಎಷ್ಟು ದಿನವಾದ್ರು ಪತ್ರ ತಲುಪಿರಲಿಲ್ಲ ನಿನ್ನೆಯಷ್ಟೆ ಪತ್ರ ತಲುಪಿದೆ ಎಂದು ಜಾಣತನ ಪ್ರದರ್ಶಿಸಿದ್ದರು.

ಮಾಜಿ ಸಂಸದ ಐ.ಜಿ.ಸನದಿಗೆ ಮಾತೃ ವಿಯೋಗ

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದರು ಆದ ಮಾನ್ಯ ಶ್ರೀ ಪ್ರೋ.ಐ.ಜಿ.ಸನದಿ ಅವರ ತಾಯಿ ಶ್ರೀಮತಿ ಫಾತೋಬಿ ಕೋಂ ಗೌಸುಸಾಹೇಬ್.ಸನದಿ ಶತಾಯುಷಿ ವಯಾ (102) ಇವರು ಇಂದು ಮಧ್ಯಾಹ್ನ 1-00

ಗದಗ ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್! : 200 ಗಡಿ ಸಮೀಪಿಸುತ್ತಿದೆ ಸೋಂಕಿತರ ಸಂಖ್ಯೆ

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ – ಸರ್ಕಾರ!

ನವದೆಹಲಿ: ಕೇಂದ್ರ ಸರ್ಕಾರದ ನೂತನ ಲಾಕ್ಡೌನ್ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ…