ಬೆಂಗಳೂರು: ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ -1 ಚಿತ್ರ ಅದ್ಭುತ ಯಶಸ್ಸು ಗಳಿಸಿದೆ. ಅಲ್ಲದೇ, ಚಾಪ್ಟರ್ -2 ಸಹ ಬಿಡುಗಡೆಗಾಗಿ ದಿನಗಣನೆ ಪ್ರಾರಂಭಗೊಂಡಿದೆ. ಈ ನಡುವೆ ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.

ತೆಲುಗು ವಾಹಿನಿ ಎವರಿ (Every) ಎಂಬ ಸ್ಥಳೀಯ ಚಾನಲ್ ಒಂದರಲ್ಲಿ ಕೆಜಿಎಫ್ ಚಾಪ್ಟರ್- 1 ರ ತೆಲುಗು ಅವತರಣಿಕೆಯನ್ನು ಅಕ್ರಮವಾಗಿ ಪ್ರಸಾರ ಮಾಡಿದೆ ಎನ್ನಲಾಗಿದೆ. ಸದ್ಯ ಚಾನಲ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿರುವ ಚಿತ್ರ ವಿತರಕ ಕಾರ್ತಿಕ್ ಗೌಡ ತಮ್ಮ ಟ್ವಿಟ್ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಕೆಜಿಎಫ್ ಚಿತ್ರದ ಸ್ಯಾಟಲೈಟ್ ಹಕ್ಕುಗಳ ಬಗೆಗಿನ ಮಾತುಕತೆ ಅಂತಿಮ ಹಂತದಲ್ಲಿರುವ ವೇಳೆ ಈ ಘಟನೆ ನಡೆದಿದೆ. ನಾವು ಈ ಕುರಿತು ಕಾನೂನು ಹೋರಾಟ ನಡೆಸಲಿದ್ದೇವೆ. ನಮ್ಮ ಬಳಿ ಟಿವಿ ಚಾನಲ್ ಚಿತ್ರ ಪ್ರಸಾರ ಮಾಡಿದ್ದರ ಬಗೆಗಿನ ಸ್ಕ್ರೀನ್ ಶಾಟ್, ವಿಡಿಯೋ ಸಾಕ್ಷಿಗಳಿದೆ” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಆಸ್ಪತ್ರೆ ಗುರುತಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಸೋಂಕಿತ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಎಂದು ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ಸರ್ಕಾರಕ್ಕೆ ವಿಪಕ್ಷಗಳ ಸಲಹೆ ಏನು ಗೊತ್ತಾ?

ಲಾಕ್ ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಹೀಗಾಗಿ ರಾಜ್ಯಕ್ಕೆ ರೂ. 50,000ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ನನ್ನ ಮನೆಯನ್ನು ದೇವರೇ ಕಾಪಾಡಬೇಕೆಂದು ನಟ ರವಿಶಂಕರ್ ಹೇಳಿದ್ಯಾಕೆ..?

ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.…