ಬೆಂಗಳೂರು: ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ -1 ಚಿತ್ರ ಅದ್ಭುತ ಯಶಸ್ಸು ಗಳಿಸಿದೆ. ಅಲ್ಲದೇ, ಚಾಪ್ಟರ್ -2 ಸಹ ಬಿಡುಗಡೆಗಾಗಿ ದಿನಗಣನೆ ಪ್ರಾರಂಭಗೊಂಡಿದೆ. ಈ ನಡುವೆ ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.

ತೆಲುಗು ವಾಹಿನಿ ಎವರಿ (Every) ಎಂಬ ಸ್ಥಳೀಯ ಚಾನಲ್ ಒಂದರಲ್ಲಿ ಕೆಜಿಎಫ್ ಚಾಪ್ಟರ್- 1 ರ ತೆಲುಗು ಅವತರಣಿಕೆಯನ್ನು ಅಕ್ರಮವಾಗಿ ಪ್ರಸಾರ ಮಾಡಿದೆ ಎನ್ನಲಾಗಿದೆ. ಸದ್ಯ ಚಾನಲ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿರುವ ಚಿತ್ರ ವಿತರಕ ಕಾರ್ತಿಕ್ ಗೌಡ ತಮ್ಮ ಟ್ವಿಟ್ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಕೆಜಿಎಫ್ ಚಿತ್ರದ ಸ್ಯಾಟಲೈಟ್ ಹಕ್ಕುಗಳ ಬಗೆಗಿನ ಮಾತುಕತೆ ಅಂತಿಮ ಹಂತದಲ್ಲಿರುವ ವೇಳೆ ಈ ಘಟನೆ ನಡೆದಿದೆ. ನಾವು ಈ ಕುರಿತು ಕಾನೂನು ಹೋರಾಟ ನಡೆಸಲಿದ್ದೇವೆ. ನಮ್ಮ ಬಳಿ ಟಿವಿ ಚಾನಲ್ ಚಿತ್ರ ಪ್ರಸಾರ ಮಾಡಿದ್ದರ ಬಗೆಗಿನ ಸ್ಕ್ರೀನ್ ಶಾಟ್, ವಿಡಿಯೋ ಸಾಕ್ಷಿಗಳಿದೆ” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.

ಒಂದು ತಿಂಗಳಿನಿಂದ ಕೊರೊನಾ ಚಿಕಿತ್ಸೆ : 6 ಬಾರಿಯ ಟೆಸ್ಟ್ ನಲ್ಲಿಯೂ ವರದಿ ಪಾಸಿಟಿವ್!

ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ…

ಕೊರೋನಾ ಸೋಂಕು ಹರಡುತ್ತಿರುವುದರ ಹಿಂದಿನ ಕ್ವಾರಂಟೈನ್ ಕಥೆ ಏನು ಗೊತ್ತಾ..!

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚತ್ತಲಿದ್ದು ಜನರಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ. ಆದರೆ ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬರುತ್ತದೆ ಎನ್ನುವಷ್ಟರಲ್ಲಿ ವಲಸಿಗರಿಗೆ ವಿನಾಯಿತಿ ನೀಡಲಾಯಿತು. ಇದು ಒಂದು ರೀತಿಯಿಂದ ಸೋಂಕು ಮತ್ತಷ್ಟು ಹರಡಲು ಕಾರಣವಾಯಿತು ಎನ್ನಬಹುದು.

ಮದ್ಯಸೇವನೆ: ಯುವಕ ಸಾವು

ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಸಾರಾಯಿ ಬಲಿ ಪಡೆದುಕೊಂಡಿದೆ.