ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಪದೆ ಪದೇ ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.

ಕುಂದಕೆರೆ ಅರಣ್ಯ ವಲಯಕ್ಕೆ ಭೇಟಿ ನೀಡಿದ ಸಚಿವ ಆನಂದ್ ಸಿಂಗ್, ಕಾಡಂಚಿನ ಗ್ರಾಮಗಳ ರೈತರು ಹಾಗೂ ಅರಣ್ಯಾಧಿಕಾರಿಗಳಿಂದ ಜಾನುವಾರುಗಳ ಮೇಲಿನ‌ ಹುಲಿ ದಾಳಿಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್, ಕಾಡಂಚಿನಲ್ಲಿ ರೈಲ್ವೆ ಬ್ಯಾರಿಕೇಡ್ ಹಾಕಲು ಚರ್ಚೆ ನಡೆಸಲಾಗಿತ್ತು. ಅಷ್ಟರಲ್ಲೇ ಕೊರೊನಾ ಬಂತು. ಹಾಗಾಗಿ ಅದು ನೆನಗುದಿಗೆ ಬಿದ್ದಿದೆ. ಬಂಡೀಪುರದ 40 ಕಿ.ಮೀ ಸೇರಿದಂತೆ ರಾಜ್ಯದ ಅರಣ್ಯಗಳ ಅಂಚಿನಲ್ಲಿ 650 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ 100 ಕೋಟಿ ಅನುದಾನ ಸಹ ಇದೆ ಎಂದು ತಿಳಿಸಿದರು.

ಕುಂದುಕೆರೆ ವಲಯದಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ವಿಚಾರವಾಗಿ ಮಾತನಾಡಿದ ಅವರು, ಮನುಷ್ಯರ ಮೇಲೆ ಹುಲಿ ದಾಳಿ ನಡೆಸುವ ಸಾದ್ಯತೆ ಇದೆ. ಹುಲಿಸೆರೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾಡು ಪ್ರಾಣಿಗಳ ದಾಳಿಯಿಂದ ಹಸು ಸತ್ತರೆ 10 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ತಳಿ ಆಧಾರದ ಮೇಲೆ ಪರಿಹಾರ ಹೆಚ್ಚಳಕ್ಕೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ರಾಜ್ಯದಲ್ಲಿ ಸಾಕು ಪ್ರಾಣಿಗಳಲ್ಲಾಗಲಿ ಅಥವಾ ಕಾಡು ಪ್ರಾಣಿಗಳಲ್ಲಾಗಲಿ ಕೊರೊನ ಕಂಡು ಬಂದಿಲ್ಲ. ಪ್ರಾಣಿಗಳಿಗೆ ಕೊರೊನಾ ತಗುಲದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.

ಶಾಶ್ವತ ಚಿರನಿದ್ರೆಗೆ ಜಾರಿದ ಚಿರು..!

ತಮಿಳುನಾಡು ಅಂದ ತಕ್ಷಣವೇ ಕಾವೇರಿ ನದಿ ವಹಿವಾಟೆ ನಮ್ಮ ಕಣ್ಣೆದುರು ಬರುತ್ತದೆ. ಕಾವೇರಿ ಸಮಸ್ಯೆ ತೀವ್ರ ಇದ್ದ 1980ರ ದಶಕದಲ್ಲಿ ಈ ಹುಡುಗ ಹುಟ್ಟುತ್ತಾನೆ. ಬೆಂಗಳೂರಿನಲ್ಲೆ ಬೆಳೆಯುವ ಈ ಹುಡುಗನ ಸಿನಿಮಾ ಹುಚ್ಚಿಗೆ ಅವರ ಮಾವ ನೀರು ಎರೆಯುತ್ತಾರೆ.

ಮತಗಟ್ಟೆ ವಿಭಜನೆಯಲ್ಲಿ ಜಿಲ್ಲಾಡಳಿತ ವಿಫಲ: ಸಾಗದ ಸರದಿ ಸಾಲು

ಉತ್ತರಪ್ರಭ ಸುದ್ದಿ ಮುಂಡರಗಿ: ತಾಲೂಕಿನ ಮುರುಡಿತಾಂಡಾ ಮತಗಟ್ಟೆ ಸಂಖ್ಯೆ 265, ರೋಣ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಇಲ್ಲಿ…

ಮಳೆ ನೀರು ಹರಿಯುವ ಕಾಲುವೆ ಹೂಳು ತೆರವು

ಹೀಗೆ ಮಾಡುವುದರಿಂದ ಕೊಳಚೆ ನೀರು ನಿಲ್ಲದಂತೆ ಮಾಡಬಹುದು, ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಜನರು ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹೇಳಿದರು.