ಚೆನ್ನೈ: ನಟಿ ನಯನತಾರಾ ಲವ್ ಸ್ಟೋರಿಗಳ ಮೂಲಕವೇ ಹೆಚ್ಚು ಸುದ್ದಿಯಾದವರು. ತಮ್ಮ ಹಿಂದಿನ ಲವ್ ಸ್ಟೋರಿಗಳನ್ನು ಮರೆತು ಇದೀಗ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ನಯನತಾರಾ ತಮ್ಮ ವಿಭಿನ್ನ ಹಾಗೂ ಹಿಟ್ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಟಿ. ಇವರು ವಿವಾದಗಳಿಂದಲೂ ದೂರವಿಲ್ಲ. ತಮ್ಮ ವೈಯಕ್ತಿಕ ಜೀವನದ ಕುರಿತು ಸಾಕಷ್ಟು ಸುದ್ದಿಯಾಗಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಸೂಪರ್ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡದಲ್ಲಿಯೂ ಜನಪ್ರಿಯತೆ ಗಳಿಸಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರು, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿದ್ದಾರೆ.

ಅಲ್ಲದೆ ಸೌತ್ ಸಿನಿರಂಗದಲ್ಲಿ ಅಧಿಕ ಸಂಭಾವನೆ ಪಡೆಯುವ ನಟಿ ಎಂದೂ ಹೆಸರು ಮಾಡಿಕೊಂಡಿದ್ದಾರೆ. ಇತ್ತೀಚೆಗೆ ನಯನತಾರಾ ವೈಯುಕ್ತಿಕ ಜೀವನದ ಬಗ್ಗೆ ಹೆಚ್ಚು ಚರ್ಚೆಯಾಗಿತ್ತು. ತಮ್ಮ ಹಿಂದಿನ ಪ್ರೀತಿ ಪ್ರೇಮದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಡ್ಯಾನ್ಸರ್ ಪ್ರಭುದೇವ, ನಟ ಸಿಂಬು ಜೊತೆಗಿನ ಪ್ರೇಮ್ ಕಹಾನಿ ಬಗ್ಗೆ ನಯನತಾರಾ ಬಹಿರಂಗ ಹೇಳಿಕೆ ನೀಡಿದ್ದರು. ಇದರ ಮಧ್ಯೆ ಸದ್ಯ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕುರಿತು ಬ್ರೇಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ.

ಶೀಘ್ರದಲ್ಲಿಯೇ ಈ ಜೋಡಿ ವಿವಾಹ ಸಹ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿಯೇ ತಮ್ಮ ಸಂಬಂಧವನ್ನು ಬಹಿರಂಗವಾಗಿ ಘೋಷಿಸಿದ್ದಾರೆ. ಅಲ್ಲದೆ ಇಬ್ಬರೂ ಜೊತೆಯಾಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

Leave a Reply

Your email address will not be published. Required fields are marked *

You May Also Like

ರಾಮಮಂದಿರ ಶಿಲಾನ್ಯಾಸ ಎಂದೋ ಆಗುತ್ತಿತ್ತು…!

ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ…

ಬಿಜೆಪಿ ಸರಕಾರ ಬರಲು ಶ್ರಮಿಸಿ: ಮಾಜಿ ಶಾಸಕ‌ ಪ್ರತಾಪಗೌಡ ಕರೆ

ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ‌‌ ಬರುವುದಕ್ಕೆ ಕಾರ್ಯಕರ್ತರು ಶ್ರಮಿಸಬೇಕೆಂದು‌ ಮಾಜಿ‌‌…

ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಹಳೆ ಗಾಯ ಇನ್ನೂ ಮಾಸಿಲ್ಲ. ಈಗ ಮತ್ತೆ ನಾಡಿನ ಜನರಿಗೆ ಜಲಾಘಾತ ಒಕ್ಕರಿಸಿದೆ. ಜಲಸ್ಫೋಟಕ್ಕೆ ಉತ್ತರ ಕರ್ನಾಟಕದ ಹಲವು ಗ್ರಾಮಗಳ ಸಾವಿರಾರೂ ಎಕರೆ ಬೆಳೆ ಜೊತೆಗೆ ಅವರ ಬದುಕು ಮತ್ತೆ ನೀರು ಪಾಲಾಗಿದೆ. ರಕ್ಕಸ ಪ್ರವಾಹಕ್ಕೆ ಎಲ್ಲವೂ ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಜನರ ಕಥೆ ಕೇಳಿದಾಗ ಕರಳು ಕಿತ್ತು ಬರುತ್ತೆ. ಮನೆಯ ಬಾಗಿಲಿಗೆ ಮತ್ತೆ ನದಿಗಳು ಭೇಟಿ ನೀಡಿವೆ. ಬದುಕನ್ನೇ ನಲುಗಿಸಿಬಿಟ್ಟಿವೆ. ರಸ್ತೆ, ಹೊಲ ಗದ್ದೆ, ಮನೆ ಮಠಗಳು ನೀರು ಪಾಲಾಗುತ್ತಿವೆ.

ಆಗಸ್ಟ್ 2ರವರೆಗೆ ಗದಗ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ

ಗದಗ: ರಾಜ್ಯ ಸರ್ಕಾರದ ನಿರ್ದೇಶನ ರೀತ್ಯ ಗದಗ ಜಿಲ್ಲೆಯಾದ್ಯಂತ  ಅಗಸ್ಟ 2 ರ ಮಧ್ಯರಾತ್ರಿಯವರೆಗೆ ಪ್ರತಿದಿನ…