ಬೆಂಗಳೂರು: ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಕೂಡ ಭಾಗವಹಿಸಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಈಗಲೇ ಲಾಕ್‌ಡೌನ್ ಸಡಿಲಿಕೆ ಮಾಡುವುದು ಬೇಡ. ರಾಜ್ಯಕ್ಕೆ ಮತ್ತಷ್ಟು ವಿನಾಯಿತಿ ಅಗತ್ಯ ಇಲ್ಲ. ನಿರ್ಬಂಧಗಳು ಮುಂದುವರಿಯಲಿ. ಸದ್ಯಕ್ಕೆ ಬೆಂಗಳೂರಿಗೆ ವಿಮಾನ ಸೇವೆ ಬೇಡ. ಮಾಲ್, ಸಿನಿಮಾ ಹಾಲ್, ಹೋಟೆಲ್‌ಗಳನ್ನು ಇನ್ನೂ ಕೆಲವು ದಿನ ಬಂದ್ ಮಾಡಬೇಕು. ಪ್ರತಿಯೊಬ್ಬರನ್ನು ಚಿಕಿತ್ಸೆಗೆ ಒಳಪಡಿಸಲು ಖಾಸಗಿ ಆಸ್ಪತ್ರೆಗಳನ್ನು ತೆರೆಯಬೇಕು. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷ ಕೆಳಗಿನ ವಯಸ್ಸಿನವರು ಮನೆಯಿಂದ ಹೊರಬರಬಾರದು ಎಂದು ಪ್ರಧಾನಿಗಳೊಂದಿಗಿನ ವಿಡಿಯೋ ಸಂವಾದದಲ್ಲಿ ಯಡಿಯೂರಪ್ಪ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಜಿಲ್ಲಾವಾರು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ಗುರುತಿಸಬಾರದು. ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಕ್ಲಸ್ಟರುಗಳ ಸುತ್ತಲಿನ 50 ರಿಂದ 100 ಮೀಟರ್ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಬೇಕು. ಇತರ ಸ್ಥಳಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಬೇಕು. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರತಂತಾಗುತ್ತದೆ. ಅಲ್ಲದೇ ರಾಜ್ಯಗಳು ಹಣಕಾಸು ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ರೋಗಲಕ್ಷಣಗಳಿಲ್ಲದ ಅಥವಾ ತೀವ್ರವಲ್ಲದ ಪ್ರಕರಣಗಳಲ್ಲಿ ಮನೆಯಲ್ಲಿಯೇ ಕಟ್ಟು ನಿಟ್ಟಿನ ಐಸೋಲೇಷನ್ನಲ್ಲಿ ಇರುವ ಮೂಲಕ ಹಾಗೂ ಟೆಲಿ ಮೆಡಿಸಿನ್ ಮೂಲಕ ಚಿಕಿತ್ಸೆ ಪಡೆಯಬಹುದು ಎಂದು ಪ್ರಧಾನಿ ಮೋದಿ ಅವರಿಗೆ ಸಿಎಂ ಯಡಿಯೂರಪ್ಪ ಅವರು ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾರ್ಯಕ್ರಮ: ಕೆ.ಎಸ್.ಈಶ್ವರಪ್ಪ

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿ ಆರಂಭಿಸಲಾಗಿದೆ. ಅಂತರ್ಜಲ ಹೆಚ್ಚಿಸುವ ಕಾಮಗಾರಿಗೆ ಆದ್ಯತೆ ನೀಡಿರುವುದರಿಂದ ರಾಜ್ಯದಲ್ಲಿ ನರೇಗಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪೇಶೆಂಟ್ ನಂ.419 ಸೃಷ್ಟಿಸಿದ ಅವಾಂತರಕ್ಕೆ ಇಡೀ ರಾಜ್ಯವೇ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ?

ಕ್ವಾರೆಂಟೈನ್ ಮುಗಿಸಿ ಬಂದ 419 ವ್ಯಕ್ತಿಯಿಂದಾಗಿ ಬೆಂಗಳೂರಿನಲ್ಲಿ ಆತಂಕ ಮನೆ ಮಾಡಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ನಿನ್ನೆ ಈ ವ್ಯಕ್ತಿ ಐಸಿಯುನಲ್ಲಿಯೇ ಇದ್ದಾನೆ ಎಂದು ಹೇಳಲಾಗಿತ್ತು.

ತಹಸೀಲ್ದಾರ್ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ

ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ಮಣಿಪುರ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ..!

ಇಂಫಾಲ: ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿಯ ಮೂವರು ಶಾಸಕರು ಮತ್ತು ಎನ್.ಪಿ.ಪಿ.ಯ ಒಬ್ಬ ಶಾಸಕ ರಾಜೀನಾಮೆ ನೀಡಿದ್ದಾರೆ.…