ಮುಂಬಯಿ: ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.

ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಆಗಮಿಸಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಸಿನಲ್ಲಿ ಒಟ್ಟು ಹತ್ತು ಬಸ್ಗಗಳ ವ್ಯವಸ್ಥೆ ಮಾಡಿ ಸೋಮವಾರ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್ಗಬಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ನಟ ಸೋನು ಸೂದ್, ಪ್ರತಿಯೊಬ್ಬರು ತಮ್ಮ ಕುಟುಂಬ, ಆತ್ಮೀಯರೊಂದಿಗೆ ಇರಲು ಇಷ್ಟಪಡುತ್ತಾರೆ. ಆದ್ದರಿಂದ ವಲಸಿಗರು ಮನೆಗೆ ತಲುಪಲು ಸಹಾಯ ಮಾಡಲು ಮಹಾರಾಷ್ಟ್ರ- ಕರ್ನಾಟಕ ರಾಜ್ಯ ಸರ್ಕಾರಗಳಿಂದ ಅನುಮತಿ ಕೋರಿದ್ದೆ. ಅದರಂತೆ ವಲಸೆ ಕಾರ್ಮಿಕರನ್ನು ಕಳಿಸಿಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜನ್ಮ ಪಡೆದ ಸ್ಥಾನದಲ್ಲಿಯೇ ಮತ್ತೆ ಆಟ ಮುಂದುವರಿಸಿದ ಕೊರೊನಾ!

ಕೊರೊನಾಗೆ ಜನ್ಮ ಸಿಕ್ಕಿದ್ದ ವುಹಾನ್ ನಗರದಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದೆ. ಇದರಿಂದಾಗಿ ಮತ್ತೆ ವಿಶ್ವದಲ್ಲಿ ಆತಂಕ ಮನೆ ಮಾಡಿದೆ.

ತ್ರಿಭಾಷಾ ಸೂತ್ರದ ಕಿಡಿಗೆ ಪವರ್ ಉತ್ತರವಿದು!

ತ್ರಿಭಾಷಾ ಸೂತ್ರ ವಿರೋಧಿಸಿ ದ್ವಿಭಾಷಾ ಸೂತ್ರಕ್ಕೆ ಬೆಂಬಲಿಸುವಂತೆ ಕಳೆದ ಕೆಲವು ದಿನಗಳಿಂದ ಟ್ವಿಟರ್ ಅಭಿಯನಾ ನಡೆಯುತ್ತಿದೆ. ಈ ಅಭಿಯಾನಕ್ಕೆ ತಾರೆಯರು ಕೂಡ ಸ್ಪಂದಿಸಿದ್ದಾರೆ. ಇದಕ್ಕೆ ಸಾಥ್ ನೀಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಡಾ. ರಾಜ್ ಕುಮಾರ್ ಅವರ ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ಮದುವೆ : ಕೋವಿಡ್ ನಿಯಮಕ್ಕೆ ಡೋಂಟ್ ಕೇರ್..!!

ಹರಪನಹಳ್ಳಿ: ಕೊರೊನಾ ಹಿನ್ನೆಲೆ ಲಾಕ್ ಡೌನ್ ಸಡಿಲಿಸಿದರೂ ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ…