ಮುಂಬಯಿ: ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.

ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಆಗಮಿಸಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಸಿನಲ್ಲಿ ಒಟ್ಟು ಹತ್ತು ಬಸ್ಗಗಳ ವ್ಯವಸ್ಥೆ ಮಾಡಿ ಸೋಮವಾರ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್ಗಬಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ನಟ ಸೋನು ಸೂದ್, ಪ್ರತಿಯೊಬ್ಬರು ತಮ್ಮ ಕುಟುಂಬ, ಆತ್ಮೀಯರೊಂದಿಗೆ ಇರಲು ಇಷ್ಟಪಡುತ್ತಾರೆ. ಆದ್ದರಿಂದ ವಲಸಿಗರು ಮನೆಗೆ ತಲುಪಲು ಸಹಾಯ ಮಾಡಲು ಮಹಾರಾಷ್ಟ್ರ- ಕರ್ನಾಟಕ ರಾಜ್ಯ ಸರ್ಕಾರಗಳಿಂದ ಅನುಮತಿ ಕೋರಿದ್ದೆ. ಅದರಂತೆ ವಲಸೆ ಕಾರ್ಮಿಕರನ್ನು ಕಳಿಸಿಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಭಿಮಾನಕ್ಕಾಗಿ ನನ್ನ ಕಣ್ಣಾಲೆಗಳು ತುಂಬಿಕೊಂಡ ಕ್ಷಣ ಅದು..

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಬಗೆಗೆ ನೀವೆಲ್ಲ ತೋರಿಸುತ್ತಿರುವ ಅಕ್ಕರೆ, ಅಭಿಮಾನ ನಮ್ಮ ಉತ್ಸಾಹ ಹೆಚ್ಚಿಸಿದೆ. ಇನ್ನು ಕೆಲ ದಿನಗಳಲ್ಲಿಯೇ ಪತ್ರಿಕೆಯನ್ನು ಆರಂಭಿಸುವ ನಮ್ಮ ಕನಸಿಗೆ ನಿಮ್ಮ ಅಭಿಮಾನ ಬಣ್ಣ ತುಂಬಿದೆ

ನಟಿ ಬಿಪಾಶಾ ಬಸು ಅವರ ಜೀವನದಲ್ಲಿ ನಡೆದ ಕಹಿ ಘಟನೆ ಯಾವುದು?

ಮಾದಕ ನಟಿ ಬಿಪಾಶಾ ಬಸು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗಿನಿಂದಲೂ ಬಹುತೇಕ ಚಿತ್ರಗಳಲ್ಲಿ ಹಾಟ್ ಆಂಡ್ ಬೋಲ್ಡ್ ಪಾತ್ರಗಳಲ್ಲಿಯೇ ನಟಿಸಿ ಅಭಿಮಾನಿಗಳ ನಿದ್ದೆಗೆಡಿಸಿದ್ದಾರೆ. ಆದರೆ, ಈ ನಟಿ ಎಷ್ಟೇ ಮಾದಕವಾಗಿದ್ದರೂ ನೇರ ಹಾಗೂ ನಿಷ್ಠುರ. ಅವರಿಗೆ ಚಿತ್ರಗಳಲ್ಲಿ ಅವಕಾಶ ಮಾತ್ರ ಕಡಿಮೆಯಾಗಿಲ್ಲ. ಸದ್ಯ ಅವರ ಜೀವನದಲ್ಲಿ ನಡೆದ ಕಹಿ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ.

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!

ಹೆತ್ತವರನ್ನೇ ಹತ್ಯೆಗೈದ ಪಾಪಿ ಮಗ..!

ತಂದೆ ತಾಯಿಯೇ ದೇವರು ಎಂದು ಪೂಜಿಸುವ ಈ ಕಾಲದಲ್ಲಿ ಇಲ್ಲೋಬ್ಬ ಪಾಪಿ ಮಗನೊಬ್ಬ ತನ್ನ ಹೆತ್ತವರನ್ನೇ ಕಬ್ಬಿಣದ ರಾಡ್​​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.