ನವದೆಹಲಿ: ಮಹಾಮಾರಿ ಕೊರೊನಾಗೆ ದೇಶದಲ್ಲಿ ದಿನದಿಂದ ದಿನಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ.

ವಿಶ್ವದಲ್ಲಿನ ವಿವಿಧ ರಾಷ್ಟ್ರಗಳಲ್ಲಿಯೂ ಹೆಮ್ಮಾರಿಯ ಆಟ ನಿಂತಿಲ್ಲ. ಈ ಮಹಾಮಾರಿಯ ನಿಯಂತ್ರಣ ಇನ್ನೂ ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,604 ಜನರಿಗೆ ಸೋಂಕು ತಗುಲಿದ್ದು, ಇಲ್ಲಿಯವರೆಗೆ ಒಟ್ಟು ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆ ಕಂಡಿದೆ.

24 ಗಂಟೆಗಳಲ್ಲಿ 87 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಸೋಂಕಿನಿಂದ ಬಲಿಯಾದವರ ಸಂಖ್ಯೆ 2,293ಕ್ಕೆ ಏರಿಕೆ ಕಂಡಿದೆ.

ಸೋಮವಾರಕ್ಕಿಂತಲೂ ಇಂದು ಸೋಂಕಿತರ ಪತ್ತೆ ಸಂಖ್ಯೆ ಕಡಿಮೆಯಾಗಿದೆ. ನಿನ್ನೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ್ದ ಮಾಹಿತಿ ಪ್ರಕಾರ 24 ಗಂಟೆಗಳಲ್ಲಿ 4,213 ಜನರಿಗೆ ಸೋಂಕು ತಗುಲಿತ್ತು. ಅಲ್ಲದೇ, 97 ಜನರು ಬಲಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಬಹುಭಾಷೆ ಸಿನಿಮಾದಲ್ಲಿ ಅನ್ಯಗ್ರಹ ಜೀವಿಯ ಪಾತ್ರದಲ್ಲಿ ಸಂದೇಶ್!

ಚಿತ್ರರಂಗದ ಕನಸು ಹೊತ್ತ ಯುವ ನಿರ್ದೇಶಕ ಸಂದೇಶ್ ಇದೀಗ ತನ್ನ ಕನಸಿನ ಬಹುಭಾಷಾ ಸಿನಿಮಾದ ತಯಾರಿಯಲ್ಲಿದ್ದಾರೆ.

ಸೋಶಿಯಲ್ ಮಿಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ ಗುಲಾಬಿ ಬಣ್ಣದ ಚೂಡಿದಾರ ಧರಿಸಿದ ಯುವತಿ

ರೊಟ್ಟಿ ಮಾಡುತ್ತ ಕುಳುತಿರುವ ಯುವತಿಯೋರ್ವಳು ಈಗ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಯಾಗಿ ಮಿಂಚುತ್ತಿದ್ದಾಳೆ.