ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ.

ಹೈದರಾಬಾದ್ಗೆ ಬಾ ಚಿಲ್ ಮಾಡೋಣ ಎಂದು ನಟ ವಿಜಯ್ ದೇವರಕೊಂಡ ಫನ್ನಿಯಾಗಿ ಸಂದೇಶ ಕಳುಹಿಸಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಲಾಕ್ ಡೌನ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ಕೆಲಸಗಳು ಕೂಡ ನಿಂತಿವೆ. ಹೀಗಾಗಿಯೇ ರಶ್ಮಿಕ ಕೊಡಗಿನ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇತ್ತ ವಿಜಯ್ ಹೈದರಾಬಾದ್ ನಲ್ಲಿ ಲಾಕ್ ಆಗಿದ್ದಾರೆ. ಈ ಸಮಯದಲ್ಲಿ ಒಬ್ಬರನೊಬ್ಬರು ಮಿಸ್ ಮಾಡಿಕೊಳ್ಳುತ್ತಿರುವ ಅವರು ಈ ರೀತಿಯ ಸಂದೇಶ ಕಳುಹಿಸಿದ್ದಾರೆ.

ಇತ್ತೀಚೆಗೆ ನಟ ವಿಜಯ್ ದೇವರಕೊಂಡ ಹುಟ್ಟುಹಬ್ಬ ಇತ್ತು. ಅಂದು ರಶ್ಮಿಕಾ ನನ್ನ ಕಾಮ್ರೇಡ್ ವಿಜಯ್ ದೇವರಕೊಂಡಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದರು. ಇದೀಗ ಆ ಟ್ವೀಟ್ಗೆರ ವಿಜಯ್ ದೇವರಕೊಂಡ ರಿಪ್ಲೈ ಮಾಡಿದ್ದು, ಮಂದಣ್ಣ ಬೇಗ ಹೈದರಾಬಾದ್ಗೆ ಬಾ ಚಿಲ್ ಮಾಡೋಣ. ನಮ್ಮ ಗ್ಯಾಂಗ್ ನಿನ್ನನ್ನು ತುಂಬ ಮಿಸ್ ಮಾಡಿಕೊಳ್ಳುತ್ತಿದೆ” ಎಂದು ಹಾರ್ಟ್ ಮತ್ತು ನಗುವ ಎಮೋಜಿ ಹಾಕಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜಕೀಯ ಹಗ್ಗ ಜಗ್ಗಾಟ: ಪಾಳುಬಿದ್ದ ಆಶ್ರಯ ಮನೆಗಳ ಪ್ರವೇಶಿಸಿದ ಜನರು

ನರೇಗಲ್ಲ: ರಾಜಕೀಯ ನಾಯಕರ ಹಗ್ಗ ಜಗ್ಗಾಟದಲ್ಲಿ 10 ವರ್ಷಗಳಿಂದ ಪಾಳುಬಿದಿದ್ದ ಆಶ್ರಯ ಮನೆಳಿಗೆ ಜನಸಾಮಾನ್ಯರು ಪ್ರವೇಶ ಪಡೆದಿದ್ದಾರೆ. ಇರುವ ಆಶ್ರಯ ಮನೆಗಳು ತಮ್ಮ ಹೆಸರಿಗೆ ಬಾರದಿದ್ದರೂ ಆಡಳಿತ ಯಂತ್ರದ ನಿರ್ಲಕ್ಷ್ಯ ಹಾಗೂ ತಮ್ಮ ಸಂಕಷ್ಟ ಸಹಿಸಲಾರದೆ ಮನೆಗಳನ್ನು ಸ್ವಚ್ಛಗೊಳಿಸಿಕೊಂಡು ಪ್ರವೇಶಿಸಿದ್ದಾರೆ.

ಗೋಲ್ಡನ್ ಸ್ಟಾರ್ ಗೆ ಅಡ್ವಾನ್ಸ್ ವಿಶ್ ಮಾಡಿದ ಕಿಚ್ಚ

ಬೆಂಗಳೂರು : ಕಿಚ್ಚ ಸುದೀಪ್ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅಡ್ವಾನ್ಸ್ ವಿಶ್ ಮಾಡಿದ್ದಾರೆ. ಗೋಲ್ಡನ್…

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ.