ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ.

ಹೈದರಾಬಾದ್ಗೆ ಬಾ ಚಿಲ್ ಮಾಡೋಣ ಎಂದು ನಟ ವಿಜಯ್ ದೇವರಕೊಂಡ ಫನ್ನಿಯಾಗಿ ಸಂದೇಶ ಕಳುಹಿಸಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಲಾಕ್ ಡೌನ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ಕೆಲಸಗಳು ಕೂಡ ನಿಂತಿವೆ. ಹೀಗಾಗಿಯೇ ರಶ್ಮಿಕ ಕೊಡಗಿನ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇತ್ತ ವಿಜಯ್ ಹೈದರಾಬಾದ್ ನಲ್ಲಿ ಲಾಕ್ ಆಗಿದ್ದಾರೆ. ಈ ಸಮಯದಲ್ಲಿ ಒಬ್ಬರನೊಬ್ಬರು ಮಿಸ್ ಮಾಡಿಕೊಳ್ಳುತ್ತಿರುವ ಅವರು ಈ ರೀತಿಯ ಸಂದೇಶ ಕಳುಹಿಸಿದ್ದಾರೆ.

ಇತ್ತೀಚೆಗೆ ನಟ ವಿಜಯ್ ದೇವರಕೊಂಡ ಹುಟ್ಟುಹಬ್ಬ ಇತ್ತು. ಅಂದು ರಶ್ಮಿಕಾ ನನ್ನ ಕಾಮ್ರೇಡ್ ವಿಜಯ್ ದೇವರಕೊಂಡಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದರು. ಇದೀಗ ಆ ಟ್ವೀಟ್ಗೆರ ವಿಜಯ್ ದೇವರಕೊಂಡ ರಿಪ್ಲೈ ಮಾಡಿದ್ದು, ಮಂದಣ್ಣ ಬೇಗ ಹೈದರಾಬಾದ್ಗೆ ಬಾ ಚಿಲ್ ಮಾಡೋಣ. ನಮ್ಮ ಗ್ಯಾಂಗ್ ನಿನ್ನನ್ನು ತುಂಬ ಮಿಸ್ ಮಾಡಿಕೊಳ್ಳುತ್ತಿದೆ” ಎಂದು ಹಾರ್ಟ್ ಮತ್ತು ನಗುವ ಎಮೋಜಿ ಹಾಕಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಮೂಲಕ 5 ಲಕ್ಷ ರೂ ಗಳವರೆಗೂ ಉಚಿತ ಆರೋಗ್ಯ ಸೇವೆ ಪಡೆದುಕೊಳ್ಳಬಹುದು: ಡಾ: ಕೆ.ಸುಧಾಕರ್

ಉತ್ತರಪ್ರಭ ಸುದ್ದಿ ಬಾಗೇಪಲ್ಲಿ: 100 ದಿನಗಳ ಅವಧಿಯಲ್ಲಿ ರಾಜ್ಯದ 5 ಲಕ್ಷ 20 ಸಾವಿರ ನಾಗರೀಕರಿಗೆ…

ಜಿಲ್ಲೆಯಲ್ಲಿಂದು 6 ಪಾಸಿಟಿವ್, ಎರಡಂಕಿ ತಲುಪಿದ ಸಾವಿನ ಸಂಖ್ಯೆ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.

ಪ್ಯಾಂಗೊಲಿನ್ ಗೂ ನಡೆಯಿತು ಕೊರೊನಾ ಪರೀಕ್ಷೆ!

ಕ್ವಾರಂಟೈನ್ ಸೆಂಟರ್ ಬಳಿ ಹೆಣ್ಣು ಪ್ಯಾಂಗೊಲಿನ್ ಗೆ ಕೊರೊನಾ ಪರೀಕ್ಷೆ ನಡೆದಿದೆ. ಬಾರಂಬಾ ವಲಯದ ಮಹುಲಿಯಾ ಯುಜಿಎಂಇ ಶಾಲೆಯ ಬಳಿ ತೆರೆಯಲಾಗಿರುವ ಕ್ವಾರಂಟೈನ್ ಕೇಂದ್ರದ ಬಳಿ ಐದು ವರ್ಷದ ಹೆಣ್ಣು ಪ್ಯಾಂಗೊಲಿನ್ ನನ್ನು ರಕ್ಷಿಸಲಾಗಿತ್ತು.

ಧಾರವಾಡದ ಸೋಂಕಿತ ವ್ಯಕ್ತಿಯಿಂದ ವೈದ್ಯರಿಗೂ ಶುರುವಾಗಿದೆ ಸಂಕಷ್ಟ!

ಹೊಸಯಲ್ಲಾಪುರ ಬಳಿಯ ಕೋಳಿಕೆರೆ ಪ್ರದೇಶದಲ್ಲಿನ ವ್ಯಕ್ತಿಗೆ ಕೊರೊನಾ ಸೋಂಕು ನಿನ್ನೆ ಕಂಡು ಬಂದಿದ್ದು, ಜಿಲ್ಲಾಡಳಿತ ಆ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದೆ.