ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ.

ಹೈದರಾಬಾದ್ಗೆ ಬಾ ಚಿಲ್ ಮಾಡೋಣ ಎಂದು ನಟ ವಿಜಯ್ ದೇವರಕೊಂಡ ಫನ್ನಿಯಾಗಿ ಸಂದೇಶ ಕಳುಹಿಸಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಲಾಕ್ ಡೌನ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ಕೆಲಸಗಳು ಕೂಡ ನಿಂತಿವೆ. ಹೀಗಾಗಿಯೇ ರಶ್ಮಿಕ ಕೊಡಗಿನ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇತ್ತ ವಿಜಯ್ ಹೈದರಾಬಾದ್ ನಲ್ಲಿ ಲಾಕ್ ಆಗಿದ್ದಾರೆ. ಈ ಸಮಯದಲ್ಲಿ ಒಬ್ಬರನೊಬ್ಬರು ಮಿಸ್ ಮಾಡಿಕೊಳ್ಳುತ್ತಿರುವ ಅವರು ಈ ರೀತಿಯ ಸಂದೇಶ ಕಳುಹಿಸಿದ್ದಾರೆ.

ಇತ್ತೀಚೆಗೆ ನಟ ವಿಜಯ್ ದೇವರಕೊಂಡ ಹುಟ್ಟುಹಬ್ಬ ಇತ್ತು. ಅಂದು ರಶ್ಮಿಕಾ ನನ್ನ ಕಾಮ್ರೇಡ್ ವಿಜಯ್ ದೇವರಕೊಂಡಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದರು. ಇದೀಗ ಆ ಟ್ವೀಟ್ಗೆರ ವಿಜಯ್ ದೇವರಕೊಂಡ ರಿಪ್ಲೈ ಮಾಡಿದ್ದು, ಮಂದಣ್ಣ ಬೇಗ ಹೈದರಾಬಾದ್ಗೆ ಬಾ ಚಿಲ್ ಮಾಡೋಣ. ನಮ್ಮ ಗ್ಯಾಂಗ್ ನಿನ್ನನ್ನು ತುಂಬ ಮಿಸ್ ಮಾಡಿಕೊಳ್ಳುತ್ತಿದೆ” ಎಂದು ಹಾರ್ಟ್ ಮತ್ತು ನಗುವ ಎಮೋಜಿ ಹಾಕಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಕೋಳಿ ಕೇಳಿ ಮಸಾಲಿ ಅರೆದಂಗಾಯಿತು ತಹಶೀಲ್ದಾರರ ನೀತಿ..!

ಶಿರಹಟ್ಟಿ ಪಟ್ಟಣದ ಕಟ್ಟಿಗೆ ಅಡ್ಡೆಗಳ ಕಹಾನಿಯನ್ನು ಕೆದಕುತ್ತಾ ಹೋದರೆ ಅವರನ್ ಬಿಟ್ಟ್, ಇವರು ಯಾರು..? ಎನ್ನುವಂತಿದೆ.

ಕೊರೊನಾ ಮಧ್ಯೆಯೇ ಚಿತ್ರದ ಮುಹೂರ್ತ ಫಿಕ್ಸ್!

ಲಾಕ್ ಡೌನ್ ನಿಂದಾಗಿ ಬಿಡುವು ಪಡೆದಿದ್ದ ಸೆನ್ಸಾರ್ ಮಂಡಳಿ ಸದ್ಯ ಮತ್ತೆ ಕೆಲಸ ಆರಂಭಿಸಿದೆ. ಅಲ್ಲದೇ, ಚಿತ್ರರಂಗ ಕೂಡ ತನ್ನ ಕೆಲಸ ಪ್ರಾರಂಭಿಸಿದೆ.

ರಾಜ್ಯದಲ್ಲಿಂದು 299 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 299 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾದಂತಾಗಿದೆ.

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಸ್ವಯಂ ನಿವೃತ್ತಿಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.