ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ ತಲುಪಿದೆ. ಇದುವರೆಗೂ 433 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಸಾವಿನ ಪ್ರಮಾಣ 31 ತಲುಪಿದೆ. 11 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 63 ಕೊರೋನಾ ಸೋಂಕಿನ ಕೇಸ್ ಪತ್ತೆಯಾಗಿವೆ. ಮೇ 12ರ ಸಂಜೆ 5 ಗಂಟೆಗೆ ಆರೋಗ್ಯ ಇಲಾಖೆ ನೀಡಿದ ಕರೋನಾ ಸೋಂಕಿನ ಕುರಿತಾದ ಮಾಹಿತಿ ಪ್ರಕಾರ ಈಗ ರಾಜ್ಯದಲ್ಲಿ 460 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೇ 11 ಸಂಜೆ 05 ರಿಂದ ಮೇ 12 ರ ಸಂಜೆ 05 ರವರೆಗೆ ಪತ್ತೆಯಾದ ಪ್ರಕರಣದಲ್ಲಿ ಬಾಗಲಕೋಟ-15, ದಾವಣಗೆರೆ-12, ಧಾರವಾಡ- 9, ಗದಗ-3 ಕೋಲಾರ ಮತ್ತು ಹಾಸನದಲ್ಲಿ ತಲಾ 5, ಬೀದರ್‌, ದಕ್ಷಿಣ ಕನ್ನಡ ಹಾಗೂ ಯಾದಗಿರಿಯಲ್ಲಿ ತಲಾ 2 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 4 ಪ್ರಕರಣಗಳು ಪತ್ತೆಯಾಗಿದ್ದು, ಮಂಡ್ಯ, ಕಲಬುರಗಿ, ಬಳ್ಳಾರಿ ಹಾಗೂ ಚಿಕ್ಕ ಬಳ್ಳಾಪುರದಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸೂರಿಲ್ಲದೆ ಬೀದಿಗೆ ಬಂದ ಬದುಕು : ಪರಿಹಾರದ ನೀರಿಕ್ಷೆಯಲ್ಲಿ ಬಡ ಕುಟುಂಬ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಬಸ್ತಿಕೆರೆಯ ಓಣಿಯ ನಿವಾಸಿ ಬಸವರಾಜ ನಿಂಗಪ್ಪ ಮಡಿವಾಳರ ಎಂಬ ವ್ಯಕ್ತಿಗೆ…

ಮಹಾರಾಷ್ಟ್ರದ ಜನರ ನಿದ್ದೆಗೆಡಿಸಿದ ಮಹಾಮಾರಿ!

ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ…

ಲಾಕ್ ಡೌನ್ ಸಡಿಲಿಕೆಗೆ ಹಾವೇರಿ ಜನ ಡೋಂಟ್ ಕೇರ್

ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆರ್ಥಿಕ ಚಟುವಟುಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಆದ್ರೆ ಗ್ರೀನ್ ಝೋನ್ ಸಡಿಲಿಕೆಗೂ ಕೆಲವೊಂದು ನಿಯಮಗಳಿಗೆ ಹಾವೇರಿ ಜನ ಕ್ಯಾರೆ ಎನ್ನುತ್ತಿಲ್ಲ.