ಮುಂಬೈ: ಕೊರೋನಾ ಹಿನ್ನೆಲೆ ಈಗಾಗಲೇ ಒಂದುವರೆ ತಿಂಗಳಿಗೂ ಅಧಿಕ ದಿನಗಳಿಂದ ದೇಶ ಲಾಕ್ ಡೌನ್ ಘೋಷಣೆಯಲ್ಲಿದೆ. ಆದರೆ ಈ ಬಿಡುವಿನ ವೇಳೆಯಲ್ಲಿ ಬಹುತೇಕ ನಟ-ನಟಿಯರು ಒಂದಲ್ಲ ಒಂದು ಚಟುವಟಿಕೆಯಲ್ಲಿ ತೊಡಗಿಕೊಮಡಿದ್ದರು. ತಮ್ಮ ಹಾಡು,ಕುಣಿತ ಹೀಗೆ ಏನೇ ಒಂದಲ್ಲ ಒಂದು ಚಟುವಟಿಕೆಗಳು ವೈರಲ್ ಆಗುತ್ತಲೇ ಇವೆ. ಆದರೆ ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ಫಾರಂ ಹೌಸ್‌ನಲ್ಲಿ ಕುಟುಂಬ ಸದಸ್ಯರೊಂದಿಗೆ ಸಿಕ್ಕಿ ಹಾಕಿಕೊಂಡಿರುವ ಸಲ್ಮಾನ್ ಖಾನ್ ತನ್ನ ಹವ್ಯಾಸಗಳನ್ನು ಪುನರ್‌ಜಾಗೃತಗೊಳಿಸುತ್ತಿದ್ದಾರೆ. ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಚಿತ್ರ ಬರೆಯುವುದು, ಕುದುರೆ ಸವಾರಿ ಮಾಡುವುದು ಹೀಗೆ ಒಂದಲ್ಲ ಒಂದು ಚಟುವಟಿಯಲ್ಲಿ ತಮ್ಮನ್ನು ತಾವು ಫುಲ್ ಬ್ಯೂಸಿಯಾಗಿಸಿಕೊಮಡಿದ್ದಾರೆ ಸಲ್ಮಾನ್ ಖಾನ್.

ಬಾಲಿವುಡ್ ನಟ ಸಲ್ಮಾನ್ ಖಾನ್ ರಚಿಸಿ ಹಾಡಿರುವ ಕೊರೋನಾ ಪ್ಯಾರ್ ಕೊರೋನಾ ಗೀತೆಗೆ ನೃತ್ಯ

ಪ್ಯಾರ್ ಕರೋನಾ ಎನ್ನುವ ಹಾಡಿಗೆ ಸಾರೆ ಜಹಾಂಸೆ ಅಚ್ಛಾ ಹಿಂದೂಸ್ತಾನ್ ಹಮಾರಾ ಎಂಬ ಸಾಲುಗಳನ್ನೂ ಸೇರಿಸಿಕೊಂಡು ಗೀತೆ ರಚನೆ ಮಾಡಿದ್ದಾರೆ ಸಲ್ಮಾನ್ ಖಾನ್. ಸುಮಧುರು ಸಂಗೀತಕ್ಕೆ ಕೊಂಚ ರ್ಯಾಪ್ ಸ್ಪರ್ಷ ಕೂಡ ಈ ಹಾಡಿಗೆ ನೀಡಲಾಗಿದೆ. ಅಂದ್ಹಾಗೆ ಈ ಗೀತೆ ರಚನೆಯಲ್ಲಿ ಹುಸೇನ್ ದಲಾಲ್ ಅವರು ಕೂಡ ಸಲ್ಮಾನ್ ಗೆ ಸಾಥ್ ನೀಡಿದ್ದಾರೆ. ಹಾಡಿಗೆ ಸಂಗೀತ ನಿರ್ದೇಶನ ಮಾಡಿರುವುದು ಸಾಜಿದ್ ವಾಜಿದ್. ಹಾಡಿನ ನಿರ್ದೇಶನವನ್ನು ಅಭಿರಾಜ್ ಮಿನಾವಾಲಾ ಮಾಡಿದ್ದಾರೆ. ಸಂಗೀತ ನಿರ್ಮಾಣ ಅದಿತ್ಯ ದೇವ್ ಅವರದ್ದು.

ಸಲ್ಲುಭಾಯ್ ಹವ್ಯಾಸಗಳಲ್ಲಿ ಇದೀಗ ಗೀತೆರಚನೆ ಹೊಸ ಸೇರ್ಪಡೆಯಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ನಾವೆಲ್ಲ ಅಳವಡಿಸಿಕೊಳ್ಳಬೇಕಾದ ಅಂಶಗಳ ಕುರಿತು ಸ್ವತಃ ಹಾಡು ರಚಿಸಿ ತಾವೇ ಹಾಡಿದ್ದು ವಿಶೇಷ. ಸಲ್ಮಾನ್ ಖಾನ್ ಅವರ ಈ ಹಾಡು ಕೆಲವೇ ಗಂಟೆಗಳಲ್ಲಿ ಫುಲ್ ವೈರಲ್ ಆಗಿದೆ.

Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 30ನೇ ವಾರ್ಡ ಕಾಂಗ್ರೇಸ್ ಪಾಲಿಗೆ

ಗದಗ ಬೇಟಗೇರಿ:ನಗರ ಸಭೆ 30ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 30ನೇ  ವಾರ್ಡನಲ್ಲಿ ಕಾಂಗ್ರೇಸಗೆ…

ಮೆಕ್ಕೆಜೋಳ ರೈತರಿಗೆ ಪರಿಹಾರ: ಇದರಲ್ಲಿ ಸಂಶಯ ಬೇಡ

ಕೊಪ್ಪಳ: ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ರೈತರನ್ನು ಎಂದಿಗೂ ಕೈಬಿಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ…

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…

ಟೀಕೆ ಮಾಡದಿರೆ ಮಾತ್ರ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಉಳಿಯುತ್ತಾರೆ: ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯ

ಹುರುಳಿಲ್ಲದಿದ್ದರೂ ಟೀಕೆ ಮಾಡುತ್ತಲೇ ಇರುವ ಡಿಕೆಶಿ ಅವರಿಗೆ ಟೀಕೆ ಮಾಡದಿದ್ದರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಪಟ್ಟದಿಂದ ಕಿತ್ತೊಗೆಯುತ್ತಾರೆ ಎಂಬ ಭೀತಿ ಆವರಿಸಿಕೊಂಡಿದೆ ಎಂದು ವ್ಯಂಗ್ಯವಾಡಿದರು.