ಬೆಂಗಳೂರು: ಈಗಾಗಲೇ ಕೊರೋನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಲಾಕ್ ಡೌನ್ ಘೋಷಿಸಿ ಎರಡು ತಿಂಗಳು ಗತಿಸುತ್ತಾ ಬರುತ್ತಿದೆ. ಇದರಿಂದಾಗಿ ಸಾಕಷ್ಟು ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಸರ್ಕಾರ ತಮ್ಮ ಸಂಕಷ್ಟಕ್ಕೆ ನೆರವಾಗಬಹುದು ಎಂದು ಬಹುತೇಕರು ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳ ಲೆಕ್ಕಾಚಾರದಲ್ಲೆ ತೊಡಗಿದ್ದಾರೆ. ಈ ಮದ್ಯೆ ನಾಳೆ ಸಂಜೆ 4 ಗಂಟೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಕರೆದಿರುವ ಸಚಿವ ಸಂಪುಟ ಸಭೆಗೆ ಮತ್ತಷ್ಟು ಮಹತ್ವ ಬಂದಿದೆ.
ಸಚಿವ ಸಂಪುಟ ಸಭೆಯ ಬಗ್ಗೆ ಜನರು ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಈ ಬಗ್ಗೆ ಸ್ಪಷ್ಟ ನಿರ್ಧಾರ ಅಥವಾ ಹೊಸ ಯೋಜನೆಗಳ ಘೋಷನೆ ಸಾಧ್ಯತೆ ಇದೆ.