ಬೆಂಗಳೂರು: ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ. ಪರೀಕ್ಷಾ ಕೊಠಡಿಗಳಲ್ಲಿ ಮುಂಜಾಗೃತ ಕ್ರಮವಾಗಿ ಎಲ್ಲಾ ಸಿದ್ಧತೆಗಳಿಗೆ ಸೂಚಿಸಲಾಗಿದ್ದು, ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ್ ಹೆಳಿದರು.

ಜೊತೆಗೆ ಸಿಇಟಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೊಠಡಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಲು ಸೂಚಿಸಲಾಗಿದೆ. ಇದರಿಂದಾಗಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಕೂಡ ಅಧಿಕವಾಗುವ ಸಾಧ್ಯತೆಗಳು ಇವೆ. ಈ ವೇಳೆ  ಎಂಜಿನಿಯರಿಂಗ್ ಸೀಟ್ ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಮಾತನಾಡಿದ ಅವರು, ಕೊರೊನಾ ಇರುವ ಕಾರಣ ಈ ಬಾರಿ ಅಡ್ಮಿಷನ್ ಆಗುವುದೇ ದೊಡ್ಡ ವಿಷಯವಾಗಲಿದೆ. ಶುಲ್ಕ ಹೆಚ್ಚಳದ ಬಗ್ಗೆ ವೈಜ್ಞಾನಿಕ ದೃಷ್ಟಿಯಿಂದ ಚಿಂತನೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ಡಿಗ್ರಿ ಕಾಲೇಜ್ ಗಳು ಈ ವರ್ಷದ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ. ಪರೀಕ್ಷೆ, ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೆಡಿಕಲ್ ಸೀಟ್ ಬ್ಲಾಕಿಂಗ್ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಈಗಾಗಲೇ ಕಮಿಟಿ ರಚನೆ ಮಾಡಿ ವರದಿ ನೀಡಿದೆ. ವರದಿ ಏನಿದೆ ಅಂತ ಸಚಿವರು ನೋಡಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅಶ್ವಥ್ ನಾರಾಯಣ್ ಉತ್ತರಿಸಿದರು.

Leave a Reply

Your email address will not be published. Required fields are marked *

You May Also Like

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸ್ಥಾನ: ನಾಮಪತ್ರ ಸಲ್ಲಿಕೆ ವೇಳೆ ಹೈಡ್ರಾಮಾ..!

ಉತ್ತರಪ್ರಭ ಗದಗ : ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ಕಾವುಕಟ್ಟಿದ…

ಹೆಚ್ಚು ಮದ್ಯ ಕುಡಿದಿದ್ದಾನೆ ಎಂಬ ಕಾರಣಕ್ಕೆ ಕೊಲೆ!

ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿಯ ಆರ್.ಟಿ. ನಗರದಲ್ಲಿ ನಡೆದಿದೆ.

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಹಾವೇರಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಸವಣೂರಿಗೆ ಬಂದಿದ್ದ ಮೂವರು ಮೂವರಲ್ಲಿ ಇಬ್ಬರಿಗೆ ಕೊರೋನಾ ಸೊಂಕು ಧೃಡವಾದಂತಾಗಿದೆ. ಇನ್ನೊಂದು ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ