ಬೆಂಗಳೂರು: ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ. ಪರೀಕ್ಷಾ ಕೊಠಡಿಗಳಲ್ಲಿ ಮುಂಜಾಗೃತ ಕ್ರಮವಾಗಿ ಎಲ್ಲಾ ಸಿದ್ಧತೆಗಳಿಗೆ ಸೂಚಿಸಲಾಗಿದ್ದು, ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ್ ಹೆಳಿದರು.

ಜೊತೆಗೆ ಸಿಇಟಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೊಠಡಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಲು ಸೂಚಿಸಲಾಗಿದೆ. ಇದರಿಂದಾಗಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಕೂಡ ಅಧಿಕವಾಗುವ ಸಾಧ್ಯತೆಗಳು ಇವೆ. ಈ ವೇಳೆ  ಎಂಜಿನಿಯರಿಂಗ್ ಸೀಟ್ ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಮಾತನಾಡಿದ ಅವರು, ಕೊರೊನಾ ಇರುವ ಕಾರಣ ಈ ಬಾರಿ ಅಡ್ಮಿಷನ್ ಆಗುವುದೇ ದೊಡ್ಡ ವಿಷಯವಾಗಲಿದೆ. ಶುಲ್ಕ ಹೆಚ್ಚಳದ ಬಗ್ಗೆ ವೈಜ್ಞಾನಿಕ ದೃಷ್ಟಿಯಿಂದ ಚಿಂತನೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ಡಿಗ್ರಿ ಕಾಲೇಜ್ ಗಳು ಈ ವರ್ಷದ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ. ಪರೀಕ್ಷೆ, ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೆಡಿಕಲ್ ಸೀಟ್ ಬ್ಲಾಕಿಂಗ್ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಈಗಾಗಲೇ ಕಮಿಟಿ ರಚನೆ ಮಾಡಿ ವರದಿ ನೀಡಿದೆ. ವರದಿ ಏನಿದೆ ಅಂತ ಸಚಿವರು ನೋಡಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅಶ್ವಥ್ ನಾರಾಯಣ್ ಉತ್ತರಿಸಿದರು.

Leave a Reply

Your email address will not be published. Required fields are marked *

You May Also Like

ಪ್ಲೀಸ್…..ಈ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಬೇಡಿ!

ಬೆಂಗಳೂರು : ಈ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಬೇಡಿ. ಈ ಸಂದರ್ಭದಲ್ಲಿ ಮಾಡಿದರೆ ಸಮಾಜಕ್ಕೆ ಬೇರೆ ಸಂದೇಶ ರವಾಣೆ ಮಾಡಿದಂತಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ಬೇಸರ ವ್ಯಕ್ತಪಡಿಸಿದ್ದಾರೆ.

ಮೆಣಸಿನಕಾಯಿ ಬೆಳೆ ನಾಶಪಡಿಸಿದ ರೈತ

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ.

ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.

ಸುಕ್ಕಾ ಹೊಡದ್ ಒಂಚೂರು ಉಪ್ಪಿನಕಾಯಿ ಒಳಗೋದ ಕೂಡ್ಲೆ ಏನಾತಂತೀರಿ…!

ಹೊಗ್ಗೋ ನಿನ್ನ ತಲಿ ದಿಮ್ ಹಿಡದಂಗಾಗಿ ಹ್ಯಂಗ್ಯಂಗರ ಮಾತಾಡಾಕತ್ತಿನಿ ಅನಸಾಕತ್ತೈತಿ ನಂಗ. ಅಯ್ಯೋ ನಂಗು ಹಂಗಾ ಅನಾಸಾಕತ್ತೈತಿ. ತಲಿ ದಿಮ್ಮಿನ ವಿಷಯ ಹೋಗ್ಲಿ ಹ್ಯಾಂಗಿತ್ತು ಮೊದಲ ದಿನದ ಅನುಭವ….!