ಬೆಂಗಳೂರು: ಮುಂದಿನ ವಾರದಿಂದ ಭಕ್ತರಿಗೆ ದೇವರು ದರ್ಶನ ಕರುಣಿಸುವ ಸಾಧ್ಯತೆ ಇದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗುತ್ತಿದ್ದು ತೀರ್ಥ, ಪ್ರಸಾದಗಳಿಗೆ ಬ್ರೇಕ್ ಬೀಳುವ ಸಾದ್ಯತೆ ಇದೆ. ಒಂದು ವೇಳೆ ಸರಕಾರ ಅವಕಾಶ ನೀಡಿದರೇ ದೇವಸ್ಥಾನಗಳಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಇಲಾಖೆ ಸಿದ್ಧಪಡಿಸಿದೆ ಎಂದು ಹೇಳಲಾಗಿದೆ.

ತಿರುಪತಿಯ ತಿಮ್ಮಪ್ಪನ ದೇವಸ್ಥಾನ ಸಹ ಸಜ್ಜಾಗುತ್ತಿರುವ ವರದಿಗಳಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರತಿ ಸಾಲಿನಲ್ಲಿ ಬರುವವರಿಗೆ ಕಟಕಟೆಗಳನ್ನು ಹಾಕಲಾಗುತ್ತಿದೆ ಎಂದು ವರದಿಯಾಗಿದೆ. ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾರ್ಚ್‌ 25ರಿಂದಲೇ ದೇವಸ್ಥಾನಗಳನ್ನು ಬಂದ್ ಮಾಡಲಾಗಿತ್ತು. ಆದರೆ ನಿತ್ಯ ದೇವರ ಪೂಜಾ ವಿಧಿ ನೆರವೇರಿಸಲು ಅರ್ಚಕರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು.

ದೇವಸ್ಥಾನಗಳನ್ನೆ ನಂಬಿಕೊಂಡ ಅದೆಷ್ಟೋ ಕುಟುಂಬಳಿಗೆ ತೀವ್ರ ತೊಂದರೆಯಾಗಿತ್ತು. ಇದರಿಂದ ದೇವಸ್ಥಾನಗಳನ್ನು ಪುನಃ ಆರಂಭಿಸಬೇಕು ಎನ್ನುವ ಬಗ್ಗೆ ಸಾಕಷ್ಟು ಒತ್ತಡಗಳಿದ್ದವು. ಈ ಕಾರಣದಿಂದ ಸರ್ಕಾರ ಕೆಲವು ನಿರ್ಭಂಧನೆಗಳನ್ನು ವಿಧಿಸಿ ದೇವಸ್ಥಾನ ಪುನಃ ತೆಗೆಯಲು ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಮೂರನೇ ಹಂತದ ಲಾಕ್‌ಡೌನ್ ಇದೇ 17ಕ್ಕೆ ಕೊನೆಗೊಳ್ಳಲಿದೆ. ಒಂದು ವೇಳೆ ವಿಸ್ತರಣೆಯಾದರೂ ಬಹುತೇಕ ಎಲ್ಲ ಸಾರ್ವಜನಿಕ ಚಟುವಟಿಕೆಗಳಿಗೆ ರಿಯಾಯಿತಿ ನೀಡುವ ಸಾಧ್ಯತೆ ಇದೆ. ಆದರೆ ಶಿಘ್ರ ಘಂಟಾನಾದ ಕೇಳಬಹುದು ಎನ್ನುವ ನಿರೀಕ್ಷೆ ಮಾತ್ರ ಜನರಲ್ಲಿ ಮೂಡಿದೆ.

Leave a Reply

Your email address will not be published. Required fields are marked *

You May Also Like

ಒಂದೆ ಬೀದಿಯಲ್ಲಿ 42 ಕೊರೋನಾ ಪಾಸಿಟಿವ್

ಇಲ್ಲಿಯ ಬೀದಿಯೊಂದರಲ್ಲಿಯೇ ದಾಖಲೆಯ 42 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.ಟಿ, ಕಾಫಿ ಮತ್ತಿತರ ಸ್ನ್ಯಾಕ್ಸ್ ವಿತರಿಸುತ್ತಿದ್ದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಆನಂತರ ಇಡೀ ಬೀದಿಗೆ ಅಂಟಿಕೊಂಡಿದೆ.

ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿ: ಡಾ.ಬಸವಲಿಂಗ ಸ್ವಾಮೀಜಿ

ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾದುದು. ಎಲ್ಲರ ಬದುಕಿಗೆ ಅನುಗುಣವಾದ ಪರಂಪರೆ ಇದು. ಈ ನಿಟ್ಟಿನಲ್ಲಿ ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಲೇಟ್ ನೈಟ್ ಪಾರ್ಟಿ ನಿಷೇಧಿಸಿದ ಕರ್ನಾಟಕ ಸರ್ಕಾರ

ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಗುರುವಾರದಿಂದ ಲೇಟ್ ನೈಟ್ ಪಾರ್ಟಿಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯದ ಎಲ್ಲಾ ಸ್ಟಾರ್ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಿಗೆ ಸೂಚಿಸಲಾಗಿದೆ ಎಂದು ಸುಧಾಕರ್ ಅವರು ಸುದ್ದಿಗಾರರಿಗೆ ತಿಳಿಸಿದರು.