ಬೆಂಗಳೂರು: ಮುಂದಿನ ವಾರದಿಂದ ಭಕ್ತರಿಗೆ ದೇವರು ದರ್ಶನ ಕರುಣಿಸುವ ಸಾಧ್ಯತೆ ಇದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗುತ್ತಿದ್ದು ತೀರ್ಥ, ಪ್ರಸಾದಗಳಿಗೆ ಬ್ರೇಕ್ ಬೀಳುವ ಸಾದ್ಯತೆ ಇದೆ. ಒಂದು ವೇಳೆ ಸರಕಾರ ಅವಕಾಶ ನೀಡಿದರೇ ದೇವಸ್ಥಾನಗಳಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಇಲಾಖೆ ಸಿದ್ಧಪಡಿಸಿದೆ ಎಂದು ಹೇಳಲಾಗಿದೆ.

ತಿರುಪತಿಯ ತಿಮ್ಮಪ್ಪನ ದೇವಸ್ಥಾನ ಸಹ ಸಜ್ಜಾಗುತ್ತಿರುವ ವರದಿಗಳಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರತಿ ಸಾಲಿನಲ್ಲಿ ಬರುವವರಿಗೆ ಕಟಕಟೆಗಳನ್ನು ಹಾಕಲಾಗುತ್ತಿದೆ ಎಂದು ವರದಿಯಾಗಿದೆ. ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾರ್ಚ್‌ 25ರಿಂದಲೇ ದೇವಸ್ಥಾನಗಳನ್ನು ಬಂದ್ ಮಾಡಲಾಗಿತ್ತು. ಆದರೆ ನಿತ್ಯ ದೇವರ ಪೂಜಾ ವಿಧಿ ನೆರವೇರಿಸಲು ಅರ್ಚಕರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು.

ದೇವಸ್ಥಾನಗಳನ್ನೆ ನಂಬಿಕೊಂಡ ಅದೆಷ್ಟೋ ಕುಟುಂಬಳಿಗೆ ತೀವ್ರ ತೊಂದರೆಯಾಗಿತ್ತು. ಇದರಿಂದ ದೇವಸ್ಥಾನಗಳನ್ನು ಪುನಃ ಆರಂಭಿಸಬೇಕು ಎನ್ನುವ ಬಗ್ಗೆ ಸಾಕಷ್ಟು ಒತ್ತಡಗಳಿದ್ದವು. ಈ ಕಾರಣದಿಂದ ಸರ್ಕಾರ ಕೆಲವು ನಿರ್ಭಂಧನೆಗಳನ್ನು ವಿಧಿಸಿ ದೇವಸ್ಥಾನ ಪುನಃ ತೆಗೆಯಲು ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಮೂರನೇ ಹಂತದ ಲಾಕ್‌ಡೌನ್ ಇದೇ 17ಕ್ಕೆ ಕೊನೆಗೊಳ್ಳಲಿದೆ. ಒಂದು ವೇಳೆ ವಿಸ್ತರಣೆಯಾದರೂ ಬಹುತೇಕ ಎಲ್ಲ ಸಾರ್ವಜನಿಕ ಚಟುವಟಿಕೆಗಳಿಗೆ ರಿಯಾಯಿತಿ ನೀಡುವ ಸಾಧ್ಯತೆ ಇದೆ. ಆದರೆ ಶಿಘ್ರ ಘಂಟಾನಾದ ಕೇಳಬಹುದು ಎನ್ನುವ ನಿರೀಕ್ಷೆ ಮಾತ್ರ ಜನರಲ್ಲಿ ಮೂಡಿದೆ.

Leave a Reply

Your email address will not be published. Required fields are marked *

You May Also Like

24 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಯಾವ ಶಾಸಕರಿಗೆ ಯಾವ ನಿಗಮ?

ರಾಜ್ಯ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ. ವರ್ಷ ತುಂಬಿದ ಈ ಸಂದರ್ಭದಲ್ಲಿ ಸರ್ಕಾರ ವಿವಿಧ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿದೆ.

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ

ಗದಗ ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 210…