ಬೆಂಗಳೂರು: ಇದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ. ಉಳಿದ 464 ಪ್ರಕರಣಗಳಲ್ಲಿ ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆ. 10 ಜನರನ್ನು ತೀವ್ರ ನಿಗಾ ಘಟಕಗಳಲ್ಲಿರಿಸಲಾಗಿದೆ.  

ನೆನ್ನೆಯ ಸಂಜೆ 5ಕ್ಕೆ ಹೋಲಿಸಿದಲ್ಲಿ ಇಂದು ಒಟ್ಟಾರೆ‌ 34 ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ. ರಾಜ್ಯಾದ್ಯಂತ ಒಟ್ಟು 20700 ವ್ಯಕ್ತಿಗಳನ್ನು ನಿಗಾವಣೆಯಲ್ಲಿಡಲಾಗಿದೆ. ರಾಜ್ಯದಲ್ಲಿ ಪರೀಕ್ಷಿಸಲಾಗಿರುವ 121178 ಮಾದರಿಗಳ ಪೈಕಿ 959 ಮಾದರಿಗಳು ಖಚಿತಗೊಂಡಿವೆ.

ದೇಶೀಯ‌ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಗರ್ಭಿಣಿ ಸ್ತ್ರೀಯರು 10 ವರ್ಷದ ಒಳಗಿನ ಮತ್ತು ಎಂಭತ್ತು ವರ್ಷ ಮೀರಿದ ಹಿರಿಯ ನಾಗರಿಕರು ಹಾಗೂ ಮಾರಣಾಂತಿಕ‌ ಖಾಯಿಲೆಯಿಂದ ಬಳಲುತ್ತಿರುವವರೆಗೆ ಹೋಮ್ ಕ್ವಾರೈಂಟೈನ್ ಅವಕಾಶ ಕಲ್ಪಿಸಲಾಗಿದೆ ಎಂದು ಸಂಜೆ ಬಿಡುಗಡೆಯಾದ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಡಿಎಪಿ ರಸಗೊಬ್ಬರ ದರ ಇಳಿಕೆ

ಧಾರವಾಡ: ಡಿಎಪಿ ರಸಗೊಬ್ಬರ ದರ ಇಳಿಕೆ ಮಾಡಿ ಸರ್ಕಾರ ಆದೇಶಿಸಿದೆ. ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್ಸಿಎಮ್ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿಎಪಿ ಗೊಬ್ಬರ ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು.

ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಶಾಸಕ ಎಚ್ಕೆ ಪಾಟೀಲ್ ಪತ್ರ

ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಜನರಲ್ ಸ್ಟೋರ್ ಗೆ ಬೆಂಕಿ!

ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಜನರಲ್ ಸ್ಟೋರ್ ಒಂದು ಹೊತ್ತಿ ಉರಿದ ಘಟನೆ ಗದಗ ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟಿನ್ ಸರ್ಕಲ್ ಬಳಿ ನಡೆದಿದೆ. ಬಸವರಾಜ್ ನಾಡಗೌಡ್ರ ಎಂಬವವರಿಗೆ ಸೇರಿದ ಜನರಲ್ ಸ್ಟೋರ್ ಇದಾಗಿದೆ ಎಂದು ಹೇಳಲಾಗ್ತಿದ್ದು, ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಸ್ಟೋರ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿವೆ.

ಸ್ಥಳದಲ್ಲೇ ಪರೀಕ್ಷಿಸಿ ಸೋಂಕಿತರ ಸಂಖ್ಯೆ ಕಡಿಮೆಗೊಳಿಸಲು ಪ್ರಯತ್ನ ನಡೆದಿದೆ

ನರೇಗಲ್‌: ಕೊರೊನಾ ವೈರಸ್ ಪಟ್ಟಣದಿಂದ ಹಳ್ಳಿಯ ಕಡೆಗೆ ಗಣನೀಯವಾಗಿ ಹಬ್ಬಿದ್ದು, ಇದನ್ನು ತಡೆಗಟ್ಟಲು ಸರ್ಕಾರ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಉಪಯೋಗವನ್ನು ಕೊರೊನಾ ಸೋಂಕಿತರು ಪಡೆದುಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ:ಎ,ಡಿ,ಸಾಮುದ್ರಿ ಹೇಳಿದ