ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆಯಿಂದ ಕುರಿಗಳಿಗೆ ಆಹಾರ ಅರಸಿ ಕುರಿಗಾಯಿಗಳು ಬಂದಿದ್ದರು. ಆದರೆ ಜೋಳದ ಚಿಗುರು ತಿಂದು ಸಾವನ್ನಪ್ಪಿವೆ ಎನ್ನಲಾಗಿದೆ.

ಕುರಿಗಾಯಿಗಳಾದ ಸಿದ್ದಪ್ಪ ಪೂಜಾರಿ, ದೇವರಾಜ್ ಪೂಜಾರಿ, ದೇವರಾಜ್ ಪೂಜಾರಿ, ಅಜಿತ್ ಪೂಜಾರಿ ಎಂಬುವವರಿಗೆ ಸೇರಿದ 62 ಕುರಿಗಳು ಸಾವನ್ನಪ್ಪಿವೆ.
ಕುರಿಗಳ ಸಾವಿನಿಂದ ಕುರಿಗಾಯಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಕಣ್ಣೆದುರಿಗೆ ಕುರಿ ಸಾಯುವುದನ್ನು ನೋಡಿ ಕುರಿಗಾಯಿಗಳು ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ‌. ಕುರಿಗಳ ಸಾವಿಗೆ ಕಾರಣವಾದ ಜೋಳದ ಚಿಗುರು ಬಾಗಲಕೋಟೆ ಪಶು ಜೈವಿಕ ಸಂಸ್ಥೆಗೆ ರವಾನಿಸಲಾಗಿದೆ.
ಕೊರೋನಾ ಸಂಕಷ್ಟದಲ್ಲಿ ಕುರಿಗಳ ಸಾವಿನಿಂದ ಕುರಿಗಾರರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಕುರಿಗಳನ್ನು ಕಳೆದುಕೊಂಡ ಕುರಿಗಾಯಿಗಳು ಪರಿಹಾರಕ್ಕಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಡಾ. ಶಾಂತಕುಮಾರ ಭಜಂತ್ರಿ ಅವರಿಗೆ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಉತ್ತರಪ್ರಭ ಸುದ್ದಿಗದಗ: ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 108ನೇ ಜಯಂತ್ಯೋತ್ಸವ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ…

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,014ರಷ್ಟು ದಾಖಲಾಗಿದೆ.

ಶಾಸಕ‌ ಶಿವನಗೌಡ ಬಗ್ಗೆ ಮಾತಾಡುವ ನೈತಿಕತೆ ಪ್ರತಾಪಗೌಡಗೆ ಇಲ್ಲ;ಶಿವಣ್ಣ ನಾಯಕ

ಉತ್ತರಪ್ರಭ ಸುದ್ದಿ ಮಸ್ಕಿ‌: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕನ ಬಗ್ಗೆ ಮಾತನಾಡಲು ಪ್ರತಾಪಗೌಡ ಪಾಟೀಲಗೆ ಯಾವ…

ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ಮದುವೆ : ಕೋವಿಡ್ ನಿಯಮಕ್ಕೆ ಡೋಂಟ್ ಕೇರ್..!!

ಹರಪನಹಳ್ಳಿ: ಕೊರೊನಾ ಹಿನ್ನೆಲೆ ಲಾಕ್ ಡೌನ್ ಸಡಿಲಿಸಿದರೂ ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ…