ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆಯಿಂದ ಕುರಿಗಳಿಗೆ ಆಹಾರ ಅರಸಿ ಕುರಿಗಾಯಿಗಳು ಬಂದಿದ್ದರು. ಆದರೆ ಜೋಳದ ಚಿಗುರು ತಿಂದು ಸಾವನ್ನಪ್ಪಿವೆ ಎನ್ನಲಾಗಿದೆ.
ಕುರಿಗಾಯಿಗಳಾದ ಸಿದ್ದಪ್ಪ ಪೂಜಾರಿ, ದೇವರಾಜ್ ಪೂಜಾರಿ, ದೇವರಾಜ್ ಪೂಜಾರಿ, ಅಜಿತ್ ಪೂಜಾರಿ ಎಂಬುವವರಿಗೆ ಸೇರಿದ 62 ಕುರಿಗಳು ಸಾವನ್ನಪ್ಪಿವೆ.
ಕುರಿಗಳ ಸಾವಿನಿಂದ ಕುರಿಗಾಯಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಕಣ್ಣೆದುರಿಗೆ ಕುರಿ ಸಾಯುವುದನ್ನು ನೋಡಿ ಕುರಿಗಾಯಿಗಳು ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುರಿಗಳ ಸಾವಿಗೆ ಕಾರಣವಾದ ಜೋಳದ ಚಿಗುರು ಬಾಗಲಕೋಟೆ ಪಶು ಜೈವಿಕ ಸಂಸ್ಥೆಗೆ ರವಾನಿಸಲಾಗಿದೆ.
ಕೊರೋನಾ ಸಂಕಷ್ಟದಲ್ಲಿ ಕುರಿಗಳ ಸಾವಿನಿಂದ ಕುರಿಗಾರರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಕುರಿಗಳನ್ನು ಕಳೆದುಕೊಂಡ ಕುರಿಗಾಯಿಗಳು ಪರಿಹಾರಕ್ಕಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.