ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆಯಿಂದ ಕುರಿಗಳಿಗೆ ಆಹಾರ ಅರಸಿ ಕುರಿಗಾಯಿಗಳು ಬಂದಿದ್ದರು. ಆದರೆ ಜೋಳದ ಚಿಗುರು ತಿಂದು ಸಾವನ್ನಪ್ಪಿವೆ ಎನ್ನಲಾಗಿದೆ.

ಕುರಿಗಾಯಿಗಳಾದ ಸಿದ್ದಪ್ಪ ಪೂಜಾರಿ, ದೇವರಾಜ್ ಪೂಜಾರಿ, ದೇವರಾಜ್ ಪೂಜಾರಿ, ಅಜಿತ್ ಪೂಜಾರಿ ಎಂಬುವವರಿಗೆ ಸೇರಿದ 62 ಕುರಿಗಳು ಸಾವನ್ನಪ್ಪಿವೆ.
ಕುರಿಗಳ ಸಾವಿನಿಂದ ಕುರಿಗಾಯಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಕಣ್ಣೆದುರಿಗೆ ಕುರಿ ಸಾಯುವುದನ್ನು ನೋಡಿ ಕುರಿಗಾಯಿಗಳು ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ‌. ಕುರಿಗಳ ಸಾವಿಗೆ ಕಾರಣವಾದ ಜೋಳದ ಚಿಗುರು ಬಾಗಲಕೋಟೆ ಪಶು ಜೈವಿಕ ಸಂಸ್ಥೆಗೆ ರವಾನಿಸಲಾಗಿದೆ.
ಕೊರೋನಾ ಸಂಕಷ್ಟದಲ್ಲಿ ಕುರಿಗಳ ಸಾವಿನಿಂದ ಕುರಿಗಾರರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಕುರಿಗಳನ್ನು ಕಳೆದುಕೊಂಡ ಕುರಿಗಾಯಿಗಳು ಪರಿಹಾರಕ್ಕಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ

ಬಳ್ಳಾರಿಯಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಅಮಾನವೀಯ ವರ್ತನೆ: 6 ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ…

ಗದಗ ಜಿಲ್ಲೆಯಲ್ಲಿ ಕೊರೊನಾಕ್ಕೆ ಯುವಕ ಬಲಿ

ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಓರ್ವ ಯುವಕ ಇಂದು ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ…

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…