ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆಯಿಂದ ಕುರಿಗಳಿಗೆ ಆಹಾರ ಅರಸಿ ಕುರಿಗಾಯಿಗಳು ಬಂದಿದ್ದರು. ಆದರೆ ಜೋಳದ ಚಿಗುರು ತಿಂದು ಸಾವನ್ನಪ್ಪಿವೆ ಎನ್ನಲಾಗಿದೆ.

ಕುರಿಗಾಯಿಗಳಾದ ಸಿದ್ದಪ್ಪ ಪೂಜಾರಿ, ದೇವರಾಜ್ ಪೂಜಾರಿ, ದೇವರಾಜ್ ಪೂಜಾರಿ, ಅಜಿತ್ ಪೂಜಾರಿ ಎಂಬುವವರಿಗೆ ಸೇರಿದ 62 ಕುರಿಗಳು ಸಾವನ್ನಪ್ಪಿವೆ.
ಕುರಿಗಳ ಸಾವಿನಿಂದ ಕುರಿಗಾಯಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಕಣ್ಣೆದುರಿಗೆ ಕುರಿ ಸಾಯುವುದನ್ನು ನೋಡಿ ಕುರಿಗಾಯಿಗಳು ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ‌. ಕುರಿಗಳ ಸಾವಿಗೆ ಕಾರಣವಾದ ಜೋಳದ ಚಿಗುರು ಬಾಗಲಕೋಟೆ ಪಶು ಜೈವಿಕ ಸಂಸ್ಥೆಗೆ ರವಾನಿಸಲಾಗಿದೆ.
ಕೊರೋನಾ ಸಂಕಷ್ಟದಲ್ಲಿ ಕುರಿಗಳ ಸಾವಿನಿಂದ ಕುರಿಗಾರರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಕುರಿಗಳನ್ನು ಕಳೆದುಕೊಂಡ ಕುರಿಗಾಯಿಗಳು ಪರಿಹಾರಕ್ಕಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಟಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ಕೊರೊನಾ ಹಬ್ಬಿದ್ದು – ಕಾಂಗ್ರೆಸ್

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ರಾಜ್ಯದಲ್ಲಿ ಕೊರೊನಾ ಹಬ್ಬಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ರೋಣದಲ್ಲಿ ಪ್ರಾಣಿಗಳ ಹಸಿವು ನೀಗಿಸಿ ಮಾನವೀಯತೆ ಮೆರೆದ ಎಎಸ್ಐ ಎಚ್.ಎಮ್.ಸರ್ವಿ

ನಗರದ ಬಸ್ ನಿಲ್ದಾಣದ ಹತ್ತಿರ ಬೀಡು ಬಿಟ್ಟಿರುವ ಕೋತಿಗಳಿಗೆ ಬಾಳೆ ಹಣ್ಣು ನೀಡುವ ಮೂಲಕ ಎಎಸ್ಐ ಒಬ್ಬರೂ ಮಾನವೀಯತೆ ಮೆರೆದ ಘಟನೆ ರೋಣದಲ್ಲಿ ನಡೆದಿದೆ.