ಗದಗ: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಗದಗ ನಗರದಲ್ಲಿ ನಡೆದಿದೆ‌.
ಇಲ್ಲಿನ ಮೂರು ಕಡೆ ಪೊಲೀಸ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿ ಈ ರೀತಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡ ಅಕ್ರಮ ವೆಸಗುವವರ ದಂಧೆಕೋರರ ನಡೆ ಬಹುತೇಕರು ವಿರೋಧಕ್ಕೆ ಕಾರಣವಾಗಿದೆ‌.

ಇಲ್ಲಿನ ಗದಗ-ಬೆಟಗೇರಿ ನಗರದ ಅಬ್ಬಿಗೇರಿ ಕಂಪೌಂಡ್, ತೀಸ್ ಬಿಲ್ಡಿಂಗ್ ಹಾಗೂ ನಿಸರ್ಗ ಬಡಾವಣೆಯಲ್ಲಿನ ಗೋಡೌನ್ ಗಳಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದ್ದ ಗೋಡೌನ್ ಗಳ ಮೇಲೆ ದಾಳಿ ನಡೆಸಲಾಯಿತು. ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಎರಡು ಟಾಟಾ ಏಸ್ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಸಂಗ್ರಹಕಾರರ ವಿರುದ್ದ ಅವಶ್ಯಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಗದಗ ಎಸ್ಪಿ ಯತೀಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಖಕ್ಕೆ ಮಾಸ್ಕ ಧರಿಸದಿದ್ದರೆ 250 ರೂ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಧರಿಸದೆ ಇರುವದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 250 ರೂ, ದಂಡ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ ಪಾಸಿಟಿವ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಷಯದ ಕುರಿತು ಸ್ವತಃ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಆತಂಕಪಡಬೇಡಿ ಎಂದು ಕೂಡ ಕೋರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ…

ಗದಗ ನಗರ ಸಭೆ ಚುನಾವಣೆ: ವ್ಹಿಲ್ ಚೆರ್ ನಲ್ಲಿ ಬಂದು ಮತಚಲಾಯಿಸಿದ ವೃದ್ದರು

ಗದಗ: ನಗರಸಭೆ ಯ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯ…