ಗದಗ: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಗದಗ ನಗರದಲ್ಲಿ ನಡೆದಿದೆ.
ಇಲ್ಲಿನ ಮೂರು ಕಡೆ ಪೊಲೀಸ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿ ಈ ರೀತಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡ ಅಕ್ರಮ ವೆಸಗುವವರ ದಂಧೆಕೋರರ ನಡೆ ಬಹುತೇಕರು ವಿರೋಧಕ್ಕೆ ಕಾರಣವಾಗಿದೆ.
ಇಲ್ಲಿನ ಗದಗ-ಬೆಟಗೇರಿ ನಗರದ ಅಬ್ಬಿಗೇರಿ ಕಂಪೌಂಡ್, ತೀಸ್ ಬಿಲ್ಡಿಂಗ್ ಹಾಗೂ ನಿಸರ್ಗ ಬಡಾವಣೆಯಲ್ಲಿನ ಗೋಡೌನ್ ಗಳಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದ್ದ ಗೋಡೌನ್ ಗಳ ಮೇಲೆ ದಾಳಿ ನಡೆಸಲಾಯಿತು. ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಎರಡು ಟಾಟಾ ಏಸ್ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಸಂಗ್ರಹಕಾರರ ವಿರುದ್ದ ಅವಶ್ಯಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಗದಗ ಎಸ್ಪಿ ಯತೀಶ್ ತಿಳಿಸಿದ್ದಾರೆ.