ಗದಗ: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಗದಗ ನಗರದಲ್ಲಿ ನಡೆದಿದೆ‌.
ಇಲ್ಲಿನ ಮೂರು ಕಡೆ ಪೊಲೀಸ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿ ಈ ರೀತಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡ ಅಕ್ರಮ ವೆಸಗುವವರ ದಂಧೆಕೋರರ ನಡೆ ಬಹುತೇಕರು ವಿರೋಧಕ್ಕೆ ಕಾರಣವಾಗಿದೆ‌.

ಇಲ್ಲಿನ ಗದಗ-ಬೆಟಗೇರಿ ನಗರದ ಅಬ್ಬಿಗೇರಿ ಕಂಪೌಂಡ್, ತೀಸ್ ಬಿಲ್ಡಿಂಗ್ ಹಾಗೂ ನಿಸರ್ಗ ಬಡಾವಣೆಯಲ್ಲಿನ ಗೋಡೌನ್ ಗಳಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದ್ದ ಗೋಡೌನ್ ಗಳ ಮೇಲೆ ದಾಳಿ ನಡೆಸಲಾಯಿತು. ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಎರಡು ಟಾಟಾ ಏಸ್ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಸಂಗ್ರಹಕಾರರ ವಿರುದ್ದ ಅವಶ್ಯಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಗದಗ ಎಸ್ಪಿ ಯತೀಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಲಗಿದೆ ರಾಜ್ಯ ಮಾಹಿತಿ ಹಕ್ಕು ವೆಬ್ ಸೈಟ್!: ಮಾಹಿತಿ ಮುಚ್ಚಿಡುವ ಯತ್ನದ ಆರೋಪ

ಜನರಿಗೆ ಮಾಹಿತಿ ಒದಗಿಸಲೆಂದೇ ಮಾಹಿತಿ ಹಕ್ಕು ಜಾರಿಗೆ ಬಂದಿದೆ. ಆದರೆ, ಜನರು ಬಯಸುವ ಮಾಹಿತಿ ನೀಡಲು ಮಾಹಿತಿ ಹಕ್ಕು ಆಯೋಗ ಹಿಂದೇಟು ಹಾಕುತ್ತಿದೆಯೇ ಎಂಬ ಸಂದೇಹ ಬರುವಂತಾಗಿದೆ. ಕಳೆದ ಒಂದು ತಿಂಗಳಿಂದ ರಾಜ್ಯದ ಮಾಹಿತಿ ಹಕ್ಕು ಅಂತರ್ಜಾಲ ತಾಣ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅರ್ಜಿ ಹಾಕಲು ಬಯಸುವವರು ನಿರಾಶರಾಗಿ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ.

ರೋಜಗಾರ್ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಛಬ್ಬಿ ತಾಂಡ ಹಾಗೂ ಗುಡ್ಡದಪೂರ ಮತ್ತು ರಣತೂರ ಗ್ರಾ.ಪಂ ವ್ಯಾಪ್ತಿಯ ದೇವಿಹಾಳ ತಾಂಡಾಗಳಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿಜೆಪಿಯಿಂದ ಎಂಎಲ್ಸಿ ಆಗಬೇಕಂತಾರಾ ವಾಟಾಳ್ ನಾಗರಾಜ್..?

ನ್ನಡಪರ ಹೋರಾಟಗಾರ, ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಬಿಜೆಪಿ ಸೇರ್ತಾರಾ..? ಹೀಗೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ.

ಯಲಗೂರ ಶಕ್ತಿಮಾನಗೆ ಭಕ್ತರ ಭಕ್ತಿಮಾನ ಸಮರ್ಪಣೆ- ಕಾತಿ೯ಕೋತ್ಸವ ಸಂಭ್ರಮ ಏಳೂರು ಒಡೆಯನ ಸನ್ನಿಧಿಯಲ್ಲಿ ಭಕ್ತಿ ಪರಾಕಾಷ್ಠೆ – ಮಿಂದೆದ್ದ ಜನಸಾಗರ

ಸಚಿತ್ರ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಕೃಷ್ಣೆಯ ತೀರದ ಪ್ರಾಕೃತಿಕ ಪರಿಮಳದ ಹಸಿನೆಲದ ಸುವಾಸನೆಯಲ್ಲಿ…