ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ, ದೇವಾಲಯಗಳನ್ನು ನಂಬಿ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿದ್ದವು. ಆದರೆ ಇದೀಗ ದೇವಸ್ಥಾನ ಆರಂಭಕ್ಕೆ ಕೆಲವು ನಿಯಮಗಳನ್ನು ವಿಧಿಸಲಾಗಿದೆ. ಹೀಗಾಗಿ ತಿರುಪತಿಯ ತಿಮ್ಮಪ್ಪನ ದರ್ಶನ ಆರಂಭವಾಗಿದೆ.
ಎರಡು ತಿಂಗಳ ನಂತರ ಭಕ್ತರಿಗೆ ತಿಮ್ಮಪ್ಪನ ದರ್ಶನ ಆರಂಭವಾಗಿದ್ದು ಕರೋನಾ ಭೀತಿ ಹಿನ್ನೆಲೆ ಮಾರ್ಚ್ 19 ರಂದು ತಿರುಪತಿಯ ವೆಂಕಟೇಶ್ವರ ಸ್ವಾಮಿಯ ಭಕ್ತರ ದರ್ಶನವನ್ನು ಟಿಟಿಡಿ ಆಡಳಿತ ಮಂಡಳಿ ರದ್ದು ಮಾಡಿತ್ತು. ಸುಮಾರು ಎರಡು ತಿಂಗಳ ಕಾಲ ದೇವಾಲಯದಲ್ಲಿ ದೇವರ ಸೇವೆ, ಪೂಜೆ ಕಾರ್ಯಕ್ರಮಗಳನ್ನು ಏಕಾಂತದಲ್ಲಿ ನಡೆಸಲಾಗುತ್ತಿತ್ತು. ಇಂದಿನಿಂದ ಸ್ಥಳೀಯರಿಗೆ ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಹೊರರಾಜ್ಯಗಳು ಹಾಗೂ ಆಂಧ್ರದ ಹೊರ ಜಿಲ್ಲೆಗಳ ಜನರಿಗೆ ನಿಷೇಧ ಮಾಡಲಾಗಿದೆ. ಪ್ರತಿದಿನ 7 ಸಾವಿರ ಜನರಿಗೆ ಮಾತ್ರ ತಿಮ್ಮಪ್ಪನ ದರ್ಶನ ಭಾಗ್ಯ ಸಿಗಲಿದೆ.

Leave a Reply

Your email address will not be published. Required fields are marked *

You May Also Like

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.

ಇಂದು 48 ಜನರಲ್ಲಿ ಕಂಡು ಬಂದ ಸೋಂಕು!! ಆತಂಕದಲ್ಲಿ ರಾಜ್ಯ!!

ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ.

ಸಂಕನೂರ್ ಅಂದಪ್ಪ ಅವರ ಸಮಾಜ ಸೇವೆ ಇತರರಿಗೂ ಆದರ್ಶ

ನಿಸ್ವಾರ್ಥ ಸಮಾಜ ಸೇವಕರ ಪೈಕಿ ಗಜೇಂದ್ರಗಡದ ಹೆಮ್ಮೆಯ ಸರಳ ಸಜ್ಜನಿಕೆಯ ಯುವಕ ಅಂದಪ್ಪ ಕಳಕಪ್ಪ ಸಂಕನೂರ ಕೂಡ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಾರದು. ಶಿಕ್ಷಣ ಪ್ರೇಮಿ ಅಂದಪ್ಪ ಅವರು, ಶ್ರೇಷ್ಠ ವರ್ತಕ ದಿ. ಬಂಗಾರಬಸಪ್ಪ ಸಂಕನೂರ ಅವರ ಮೊಮ್ಮಗನಾಗಿದ್ದು, ಸಂಕನೂರ ಅಂದಪ್ಪ ಎಂದೇ ಚಿರಪರಿಚಿತರು.

ಕೊರೋನಾ ಸೋಂಕಿನಿಂದ ಗುಣ ಹೊಂದಿದ 12 ದಿನದ ಮಗುವಿನ ಹೆಸರೇನು ಗೊತ್ತಾ?

ಒಂಭತ್ತು ದಿನದ ಮಗುವಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಇದೀಗ 12 ದಿನದ ಈ ಮಗು ಕೊರೋನಾ ಸೋಂಕಿನಿಂದ ಗುಣ ಹೊಂದಿದ್ದು ಮಗುವಿಗೆ ಇಂದು ಹೆಸರಿಡಲಾಗಿದೆ.