ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ, ದೇವಾಲಯಗಳನ್ನು ನಂಬಿ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿದ್ದವು. ಆದರೆ ಇದೀಗ ದೇವಸ್ಥಾನ ಆರಂಭಕ್ಕೆ ಕೆಲವು ನಿಯಮಗಳನ್ನು ವಿಧಿಸಲಾಗಿದೆ. ಹೀಗಾಗಿ ತಿರುಪತಿಯ ತಿಮ್ಮಪ್ಪನ ದರ್ಶನ ಆರಂಭವಾಗಿದೆ.
ಎರಡು ತಿಂಗಳ ನಂತರ ಭಕ್ತರಿಗೆ ತಿಮ್ಮಪ್ಪನ ದರ್ಶನ ಆರಂಭವಾಗಿದ್ದು ಕರೋನಾ ಭೀತಿ ಹಿನ್ನೆಲೆ ಮಾರ್ಚ್ 19 ರಂದು ತಿರುಪತಿಯ ವೆಂಕಟೇಶ್ವರ ಸ್ವಾಮಿಯ ಭಕ್ತರ ದರ್ಶನವನ್ನು ಟಿಟಿಡಿ ಆಡಳಿತ ಮಂಡಳಿ ರದ್ದು ಮಾಡಿತ್ತು. ಸುಮಾರು ಎರಡು ತಿಂಗಳ ಕಾಲ ದೇವಾಲಯದಲ್ಲಿ ದೇವರ ಸೇವೆ, ಪೂಜೆ ಕಾರ್ಯಕ್ರಮಗಳನ್ನು ಏಕಾಂತದಲ್ಲಿ ನಡೆಸಲಾಗುತ್ತಿತ್ತು. ಇಂದಿನಿಂದ ಸ್ಥಳೀಯರಿಗೆ ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಹೊರರಾಜ್ಯಗಳು ಹಾಗೂ ಆಂಧ್ರದ ಹೊರ ಜಿಲ್ಲೆಗಳ ಜನರಿಗೆ ನಿಷೇಧ ಮಾಡಲಾಗಿದೆ. ಪ್ರತಿದಿನ 7 ಸಾವಿರ ಜನರಿಗೆ ಮಾತ್ರ ತಿಮ್ಮಪ್ಪನ ದರ್ಶನ ಭಾಗ್ಯ ಸಿಗಲಿದೆ.

Leave a Reply

Your email address will not be published. Required fields are marked *

You May Also Like

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.

ಭಾರತದ ಏಕೈಕ ‘ಬಂಗಾರದ ಹುಲಿ’ ನೋಡಿದ್ದೀರಾ?: ಚಿನ್ನದ ಮೈಬಣ್ಣ, ಕೆಂಪು-ಕಂದು ಪಟ್ಟಿಗಳ ಸುಂದರಿ!

ಇದು ಅಪರೂಪದ ಹುಲಿ. ದೇಶದಲ್ಲಿ ಈಗ ಒಂದೇ ಒಂದು ಉಳಿದಿದೆ. ಅಸ್ಸಾಮಿನ ಅರಣ್ಯದಲ್ಲಿ ಖ್ಯಾತ ವನ್ಯಜೀವಿ ಫೋಟೊಗ್ರಾಫರ್ ಒಬ್ಬರು ಸೆರೆ ಹಿಡಿದ ಚಿತ್ರಗಳಿವು.

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…

ಗದಗ ಜಿಲ್ಲೆಯಲ್ಲಿ ಬಾರ್ ಗಳ ಮುಂದೆ ಜನವೋ ಜನ

ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ.