ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ, ದೇವಾಲಯಗಳನ್ನು ನಂಬಿ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿದ್ದವು. ಆದರೆ ಇದೀಗ ದೇವಸ್ಥಾನ ಆರಂಭಕ್ಕೆ ಕೆಲವು ನಿಯಮಗಳನ್ನು ವಿಧಿಸಲಾಗಿದೆ. ಹೀಗಾಗಿ ತಿರುಪತಿಯ ತಿಮ್ಮಪ್ಪನ ದರ್ಶನ ಆರಂಭವಾಗಿದೆ.
ಎರಡು ತಿಂಗಳ ನಂತರ ಭಕ್ತರಿಗೆ ತಿಮ್ಮಪ್ಪನ ದರ್ಶನ ಆರಂಭವಾಗಿದ್ದು ಕರೋನಾ ಭೀತಿ ಹಿನ್ನೆಲೆ ಮಾರ್ಚ್ 19 ರಂದು ತಿರುಪತಿಯ ವೆಂಕಟೇಶ್ವರ ಸ್ವಾಮಿಯ ಭಕ್ತರ ದರ್ಶನವನ್ನು ಟಿಟಿಡಿ ಆಡಳಿತ ಮಂಡಳಿ ರದ್ದು ಮಾಡಿತ್ತು. ಸುಮಾರು ಎರಡು ತಿಂಗಳ ಕಾಲ ದೇವಾಲಯದಲ್ಲಿ ದೇವರ ಸೇವೆ, ಪೂಜೆ ಕಾರ್ಯಕ್ರಮಗಳನ್ನು ಏಕಾಂತದಲ್ಲಿ ನಡೆಸಲಾಗುತ್ತಿತ್ತು. ಇಂದಿನಿಂದ ಸ್ಥಳೀಯರಿಗೆ ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಹೊರರಾಜ್ಯಗಳು ಹಾಗೂ ಆಂಧ್ರದ ಹೊರ ಜಿಲ್ಲೆಗಳ ಜನರಿಗೆ ನಿಷೇಧ ಮಾಡಲಾಗಿದೆ. ಪ್ರತಿದಿನ 7 ಸಾವಿರ ಜನರಿಗೆ ಮಾತ್ರ ತಿಮ್ಮಪ್ಪನ ದರ್ಶನ ಭಾಗ್ಯ ಸಿಗಲಿದೆ.

Leave a Reply

Your email address will not be published. Required fields are marked *

You May Also Like

ಈ ನದಿಗಳ ಜಲಮಾರ್ಗದಲ್ಲಿ ಸರಕು ಸಾಗಾಟಕ್ಕೆ ನಿರ್ಬಂಧ

ರಾಜ್ಯದ 5 ಜಲಮಾರ್ಗಗಳಲ್ಲಿ ಸರಕು ಸಾಗಾಣಿಕೆ ಮಾಡುವ ಮಹತ್ವದ ಯೋಜನೆಗೆ ಆರ್ಥಿಕವಾಗಿ ಲಾಭದಾಯಕವಾಗಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಹಿನ್ನಡೆಯಾಗಿದೆ.

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.

ದೋತರಾ ಹರಿದು ಮಾಸ್ಕ್ ಮಾಡಿನಿ: ಎಸ್.ಎಸ್.ಪಾಟೀಲ್

ನಾನು ನನ್ನ ಧೋತರ ಹರಿದು ಮಾಸ್ಕ್ ಮಾಡಿಕೊಂಡಿದ್ದೇನೆ. ಇವುಗಳನ್ನೆ ನಮ್ಮ ಹೊಲದಲ್ಲಿ ಕೆಲಸ ಮಡುವ ಕಾರ್ಮಿಕರಿಗೂ ನೀಡಿದ್ದೇನೆ ಎಂದು ಮಾಜಿ ಸಚಿವ ಎಸ್.ಎಸ್.ಪಾಟೀಲ್