ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ, ದೇವಾಲಯಗಳನ್ನು ನಂಬಿ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿದ್ದವು. ಆದರೆ ಇದೀಗ ದೇವಸ್ಥಾನ ಆರಂಭಕ್ಕೆ ಕೆಲವು ನಿಯಮಗಳನ್ನು ವಿಧಿಸಲಾಗಿದೆ. ಹೀಗಾಗಿ ತಿರುಪತಿಯ ತಿಮ್ಮಪ್ಪನ ದರ್ಶನ ಆರಂಭವಾಗಿದೆ.
ಎರಡು ತಿಂಗಳ ನಂತರ ಭಕ್ತರಿಗೆ ತಿಮ್ಮಪ್ಪನ ದರ್ಶನ ಆರಂಭವಾಗಿದ್ದು ಕರೋನಾ ಭೀತಿ ಹಿನ್ನೆಲೆ ಮಾರ್ಚ್ 19 ರಂದು ತಿರುಪತಿಯ ವೆಂಕಟೇಶ್ವರ ಸ್ವಾಮಿಯ ಭಕ್ತರ ದರ್ಶನವನ್ನು ಟಿಟಿಡಿ ಆಡಳಿತ ಮಂಡಳಿ ರದ್ದು ಮಾಡಿತ್ತು. ಸುಮಾರು ಎರಡು ತಿಂಗಳ ಕಾಲ ದೇವಾಲಯದಲ್ಲಿ ದೇವರ ಸೇವೆ, ಪೂಜೆ ಕಾರ್ಯಕ್ರಮಗಳನ್ನು ಏಕಾಂತದಲ್ಲಿ ನಡೆಸಲಾಗುತ್ತಿತ್ತು. ಇಂದಿನಿಂದ ಸ್ಥಳೀಯರಿಗೆ ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಹೊರರಾಜ್ಯಗಳು ಹಾಗೂ ಆಂಧ್ರದ ಹೊರ ಜಿಲ್ಲೆಗಳ ಜನರಿಗೆ ನಿಷೇಧ ಮಾಡಲಾಗಿದೆ. ಪ್ರತಿದಿನ 7 ಸಾವಿರ ಜನರಿಗೆ ಮಾತ್ರ ತಿಮ್ಮಪ್ಪನ ದರ್ಶನ ಭಾಗ್ಯ ಸಿಗಲಿದೆ.

Leave a Reply

Your email address will not be published. Required fields are marked *

You May Also Like

ಹತ್ರಾಸ್ ಸಂತ್ರಸ್ತೆಯ ಸಹೋದರ ಸಂಬಂಧಿ, ಆರೋಪಿ 100 ಬಾರಿ ಫೋನ್ ನಲ್ಲಿ ಮಾತನಾಡಿದ್ದೇಕೆ?

ಲಖನೌ : ದೇಶದಲ್ಲಿ ಸದ್ಯ ಹತ್ರಾಸ್ ಬಾಲಕಿಯ ಅತ್ಯಾಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದೆ.

ಎಪಿಎಂಸಿ ಚೆಕ್‌ಪೊಸ್ಟ್ ನಲ್ಲಿ ಹಣ ವಸೂಲಿ ದಂಧೆ?

ಎಪಿಎಂಸಿ ಚೆಕ್‌ಪೊಸ್ಟ್ನಲ್ಲಿ ವಾಹನ ತಪಾಸಣೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ…